August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಶ್ಮೀರ ಭಯೋತ್ಪಾದಕ ದಾಳಿ – ರಾಜ್ಯ ದಾರಿಮಿ ಉಲಮಾ ಒಕ್ಕೂಟ ಖಂಡನೆ 

ಕಾಶ್ಮೀರ ರಾಜ್ಯದ ಪಹಲ್ಗಾಂ ಪ್ರವಾಸಿ ತಾಣಕ್ಕೆ ಬೇಟಿ ನೀಡಿದ ನಾಗರಿಕರ ಮೇಲೆ ನಡೆದ ರಾಕ್ಷಸೀಯ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಅತ್ಯುಗ್ರವಾಗಿ ಖಂಡಿಸುತ್ತಿದೆ. ನರ ರಾಕ್ಷಸ ಭಯೋತ್ಪಾದಕರ ಹುಟ್ಟಡಗಿಸಲು ಸರಕಾರಗಳು ಇಚ್ಚಾ ಶಕ್ತಿ ಪ್ರದರ್ಶಿಸ ಬೇಕೆಂದು ಒಕ್ಕೂಟ ಆಗ್ರಹಿಸುತ್ತಿದೆ.

ಪ್ರಜೆಗಳಿಗೆ ಸುರಕ್ಷತೆ ನೀಡ ಬೇಕಾದದ್ದು ಸರಕಾರಗಳ ಆದ್ಯ ಕರ್ತವ್ಯವಾಗಿದೆ‌.ಸುಮಾರು ಐನೂರರಷ್ಟು ಪ್ರವಾಸಿಗರಿದ್ದ ಜಾಗದಲ್ಲಿ ಪೋಲೀಸರ ಕಾವಲು ಇಲ್ಲದೇ ಇದ್ದದ್ದು ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆಯಾದರೂ ಈ ವಿಷಮ ಘಟ್ಟದಲ್ಲಿ ಪರಸ್ಪರ ಟೀಕಾ ಪ್ರಹಾರಗಳನ್ನು ಬದಿಗಿರಿಸಿ ಸರಕಾರದ ಜೊತೆ ಕೈ ಜೋಡಿಸ ಬೇಕಾಗಿದೆ ಎಂದು ಉಲಮಾ ಒಕ್ಕೂಟ ಅಭಿಪ್ರಾಯ ಪಟ್ಟಿದೆ.ಇದರ ಹಿಂದಿರುವ ಕ್ಷುದ್ರ ಶಕ್ತಿಯನ್ನು ಅತೀ ಶೀಘ್ರದಲ್ಲೇ ಪತ್ತೆ ಹಚ್ಚಿ ಅದರ ಮೂಲವನ್ನು ನಾಶ ಮಾಡಲು ಸರಕಾರ ಪಣತೊಡಬೇಕಿದೆ. ಆದರೆ ನಿರಪರಾಧಿಗಳು ಬಲಿಯಾಗದಂತೆ ಜಾಗೃತೆ ವಹಿಸುವುದೂ ಅಗತ್ಯವಾಗಿದೆ. ಅದೇ ವೇಳೆ ಭಯೋತ್ಪಾಕ ದಾಳಿಯನ್ನು ಮುಂದಿಟ್ಟು ದೇಶದ ಮುಸ್ಲಿಮರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಶಾಂತಿ ಕದಡುವವರ ವಿರುದ್ದ ಕಾನೂನು ಕ್ರಮ ಕೈ ಗೊಳ್ಳುವುದು ಕೂಡಾ ಅಗತ್ಯ ಎಂದು ಉಲಮಾ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page