January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

You may also like

News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ
News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ

You cannot copy content of this page