ಬಂಟ್ವಾಳದಲ್ಲಿ ಸಾವಿರಾರು ಜನರಿಂದ ಸುಹಾಸ್ ಶೆಟ್ಟಿಗೆ ಅಂತಿಮ ನಮನ

ಬಜ್ಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿಗೆ ಅಂತಿಮ ನಮನ ಸಲ್ಲಿಸಲು ಬಂಟ್ವಾಳದ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಈ ವೇಳೆ ಜನಸಾಗರವೇ ಹರಿದು ಬಂತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡುಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರ ಹಲವಾರು ನಾಯಕರು ಸ್ಥಳದಲ್ಲಿ ಉಪಸ್ಥಿತರಿದ್ದರು. IG ಅಮಿತ್ ಸಿಂಗ್, SP ಯತೀಶ್ ಎನ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಮತ್ತು SI ರಾಮಕೃಷ್ಣರವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬಂಟ್ವಾಳದಲ್ಲಿಯೇ ಇದ್ದರು.
ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯ ಮೆರವಣಿಗೆ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಖಾಸಗಿ ಆಸ್ಪತ್ರೆಯಿಂದ ಪ್ರಾರಂಭವಾಗಿ ಅವರ ಹುಟ್ಟೂರಾದ ಬಂಟ್ವಾಳದ ಕಾರಿಂಜಕ್ಕೆ ತೆರಳಿತು. ಮೆರವಣಿಗೆಯಲ್ಲಿ ದೊಡ್ಡ ಜನಸಮೂಹವೇ ಭಾಗವಹಿಸಿತ್ತು.