February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಇಂದು ಸಹಜ ಸ್ಥಿತಿಗೆ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಮೇ 2ರಂದು ಶುಕ್ರವಾರ ಮಂಗಳೂರು ಬಂದ್ ಆಗಿತ್ತು. ಇಂದು ಮೇ 3ರಂದು ಶನಿವಾರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ತಲುಪಿದೆ. ನಿನ್ನೆ ಸಂಜೆಯಿಂದಲೇ ಮಂಗಳೂರಿನ ವಿವಿಧೆಡೆಗಳಲ್ಲಿ ಕೆಲವೊಂದು ಅಂಗಡಿಗಳು ತೆರೆದಿದ್ದವು. ಶುಕ್ರವಾರ ಬಂದ್ ನ ಸರಿಯಾದ ಮಾಹಿತಿ ಇಲ್ಲದ ಕಾರಣ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಸಂಜೆ ವೇಳೆ ಅಲ್ಲಲ್ಲಿ ತೆರೆದಿರುವ ಅಂಗಡಿಗಳಿಗೆ ಜನರು ಅಗತ್ಯ ವಸ್ತುಗಳಿಗಾಗಿ ಮುಗಿಬಿದ್ದ ದೃಶ್ಯ ಕಂಡು ಬಂದಿತ್ತು.

ಇಂದು ಬೆಳಗ್ಗಿನಿಂದಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳು ಸಂಚಾರ ಆರಂಭಿಸಿದೆ. ಆಟೋ, ಟೆಂಪೋ ಸೇರಿದಂತೆ ಎಲ್ಲ ವಾಹನಗಳು ರಸ್ತೆಗಿಳಿದಿವೆ. ಶುಕ್ರವಾರದ ಬಂದ್ ವೇಳೆ ವಾಹನ ಸಂಚಾರ ಹೆಚ್ಚಾಗಿ ಇರಲಿಲ್ಲ, ಅಂಗಡಿಗಳು ಕೂಡ ತೆರೆದಿರಲಿಲ್ಲ. ನಿನ್ನೆ ಬಂದ್ ನಿಂದಾಗಿ ಸಾಕಷ್ಟು ಜನರು ತೊಂದರೆಗೀಡಾಗಿದ್ದರು. ಏಕಾಏಕಿ ಮಂಗಳೂರಿನಲ್ಲಿ ಬಂದ್ ಆಚರಿಸಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಗಲಾಟೆಗಳು ನಡೆಯಬಹುದು ಎನ್ನುವ ಭೀತಿಯಿಂದ ಸಾಕಷ್ಟು ಅಂಗಡಿಗಳ ಮಾಲಿಕರು ಅಂಗಡಿ ಬಂದ್ ಮಾಡಿರುವುದು ಕಂಡು ಬಂತು.

 

You may also like

News

ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ದಾಯ್ಜಿವರ್ಲ್ಡ್ ಮೈಲಿಗಲ್ಲು

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ‘ಕರಾವಳಿಯ ಧ್ವನಿ’ ಕರಾವಳಿ ಕರ್ನಾಟಕದ ಹೆಮ್ಮೆಯ ಬಹುಮಾಧ್ಯಮ ಜಾಲ ‘ದಾಯ್ಜಿವರ್ಲ್ಡ್.ಕಾಮ್’ (Daijiworld.com) ತನ್ನ ಅರ್ಥಪೂರ್ಣ ಸೇವೆಯ 25 ವರ್ಷಗಳನ್ನು ಪೂರೈಸಿದ್ದು, ಈ ಐತಿಹಾಸಿಕ
News

ಐದು ವರ್ಷಗಳ ಸಾರ್ಥಕ ಸೇವೆ – ಕೊಳ್ನಾಡು ಗ್ರಾಮದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಪಾಧ್ಯಕ್ಷೆ ಅಸ್ಮ ಹಸೈನಾರ್

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಕಳೆದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡಿದ ಮತದಾರರಿಗೆ ಹಾಗೂ ಹಿತೈಷಿಗಳಿಗೆ

You cannot copy content of this page