ಗಾಯಗೊಂಡ ನೌಶಾದ್ ರನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಆಸ್ಪತ್ರೆಯಲ್ಲಿ ಭೇಟಿ – ಪರಿಹಾರದ ಭರವಸೆ

ಮೇ 2ರಂದು ಶುಕ್ರವಾರ ರಾತ್ರಿ 3:30 ಗಂಟೆಗೆ ಕಣ್ಣೂರು ನಿವಾಸಿ ನೌಶಾದ್ ಎಂಬುವರಿಗೆ ಚೂರಿ ಇರಿತದಿಂದ ಗಂಭೀರ ಗಾಯಗಳಾಗಿತ್ತು. ಅವರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿದ್ದ MLC ಐವನ್ ಡಿಸೋಜರವರು ಇಂದು ಮೇ 4ರಂದು ಆದಿತ್ಯವಾರ ಮಂಗಳೂರಿಗೆ ಆಗಮಿಸಿದ ದಿನದಂದೇ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶಾದ್ ರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರಕಾರದಿಂದ ಸಿಗುವ ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಒದಗಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಶ್ರಫ್ ಬಂದರ್, ಇಮ್ರಾನ್ ಕುದ್ರೋಳಿ, ಸಲೀಂ, ಸಲೀಹ್ ಬಜ್ಪೆ, ನವಾಜ್ ಜೆಪ್ಪು, ಹಬೀಬುಲ್ಲಾ ಕಣ್ಣೂರು, ಮಾಜಿ ಮನಪಾ ಸದಸ್ಯರು ಬಾಸ್ಕರ್ ರಾವ್, ನಜೀರ್ ಬಜಾಲ್ ಹಾಗೂ ಇತರರು ಉಪಸ್ಥಿತರಿದ್ದರು.