January 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಾಯಗೊಂಡ ನೌಶಾದ್ ರನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಆಸ್ಪತ್ರೆಯಲ್ಲಿ ಭೇಟಿ – ಪರಿಹಾರದ ಭರವಸೆ

ಮೇ 2ರಂದು ಶುಕ್ರವಾರ ರಾತ್ರಿ 3:30 ಗಂಟೆಗೆ ಕಣ್ಣೂರು ನಿವಾಸಿ ನೌಶಾದ್ ಎಂಬುವರಿಗೆ ಚೂರಿ ಇರಿತದಿಂದ ಗಂಭೀರ ಗಾಯಗಳಾಗಿತ್ತು. ಅವರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿದ್ದ MLC ಐವನ್ ಡಿಸೋಜರವರು ಇಂದು ಮೇ 4ರಂದು ಆದಿತ್ಯವಾರ ಮಂಗಳೂರಿಗೆ ಆಗಮಿಸಿದ ದಿನದಂದೇ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೌಶಾದ್ ರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರಕಾರದಿಂದ ಸಿಗುವ ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಒದಗಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಶ್ರಫ್ ಬಂದರ್, ಇಮ್ರಾನ್ ಕುದ್ರೋಳಿ, ಸಲೀಂ, ಸಲೀಹ್ ಬಜ್ಪೆ, ನವಾಜ್ ಜೆಪ್ಪು, ಹಬೀಬುಲ್ಲಾ ಕಣ್ಣೂರು, ಮಾಜಿ ಮನಪಾ ಸದಸ್ಯರು ಬಾಸ್ಕರ್ ರಾವ್, ನಜೀರ್ ಬಜಾಲ್ ಹಾಗೂ ಇತರರು ಉಪಸ್ಥಿತರಿದ್ದರು.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page