September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ವಕೀಲರ ಸಂಘ (ರಿ.) ಇದರ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರ್ ಆಯ್ಕೆ

ಬಂಟ್ವಾಳದ ವಕೀಲರ ಸಂಘ (ರಿ.) ಇದರ 2025-27ನೇ ಸಾಲಿನ ಚುನಾವಣೆಯು ಮೇ 3ರಂದು ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ.ರವರು 123 ಮತಗಳನ್ನು ಪಡೆದು ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ.ವಿ. ಭಟ್ ಮತ್ತು ಎಂ.ವಿ. ಭಟ್ ರವರು ಉಪ ಚುನಾವಣಾಧಿಕಾರಿಗಳಾಗಿದ್ದರು. ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರವರ ಮೇಲುಸ್ತುವಾರಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page