ಬಂಟ್ವಾಳದ ವಕೀಲರ ಸಂಘ (ರಿ.) ಇದರ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರ್ ಆಯ್ಕೆ

ಬಂಟ್ವಾಳದ ವಕೀಲರ ಸಂಘ (ರಿ.) ಇದರ 2025-27ನೇ ಸಾಲಿನ ಚುನಾವಣೆಯು ಮೇ 3ರಂದು ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ.ರವರು 123 ಮತಗಳನ್ನು ಪಡೆದು ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ.ವಿ. ಭಟ್ ಮತ್ತು ಎಂ.ವಿ. ಭಟ್ ರವರು ಉಪ ಚುನಾವಣಾಧಿಕಾರಿಗಳಾಗಿದ್ದರು. ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರವರ ಮೇಲುಸ್ತುವಾರಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.