May 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ ಬರುವಷ್ಟರಲ್ಲಿ 7 ಲಕ್ಷದ ಚಿನ್ನ ನಾಪತ್ತೆ – ಪ್ರಕರಣ ದಾಖಲು

ಆಂಧ್ರಪ್ರದೇಶದ ನೆಲ್ಲೂರಿನ 47ವರ್ಷ ಪ್ರಾಯದ ಜೆ. ಲತಾ ಎಂಬವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಲು ಬಾಡಿಗೆ ಇನ್ನೋವಾ ಕಾರಿನಲ್ಲಿ ಮೇ 2ರಂದು ನೆಲ್ಲೂರಿನಿಂದ ಹೊರಟು ಮೇ 3ರಂದು ಧರ್ಮಸ್ಥಳ ತಲುಪಿದ್ದರು. ದೇವರ ದರ್ಶನಕ್ಕೆ ಹೋಗುವ ಮೊದಲು ಜೆ. ಲತಾ ಅವರು ಕಾರ್ಯಕ್ರಮಕ್ಕೆ ಎಂದು ಜೊತೆಯಲ್ಲಿ ತಂದಿದ್ದ ಚಿನ್ನಭರಣಗಳಾದ ಬ್ರೇಸ್ ಲೆಟ್, ಚಿನ್ನದ ಚೈನ್, ನೆಕ್ಲೇಸ್ ಅನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದರು.

ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ ತೆರೆದಿದ್ದು, ಆತಂಕದಿಂದ ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಇಟ್ಟಿದ್ದ 97 ಗ್ರಾಮ್ ತೂಕದ ಚಿನ್ನಾಭರಣಗಳು ಕಳವಾಗಿದ್ದು ಗಮನಕ್ಕೆ ಬಂತು. ಕಳವಾದ ಚಿನ್ನದ ಒಟ್ಟು ಮೌಲ್ಯ ರೂಪಾಯಿ 6,79,000/- ಆಗಿರುತ್ತದೆ.

ಪಿರ್ಯಾಧಿದಾರರಾದ 47ವರ್ಷ ಪ್ರಾಯದ ಜೆ. ಲತಾ, ವಾಸ: ಶ್ರೀ ನಗರ ಕಾಲೋನಿ, ಸಾಯಿ ಹೃದಯ ಟೆಂಪಲ್ ಗೋಮತಿ ನಗರ ನೆಲ್ಲೂರು ಜಿಲ್ಲೆ ಆಂದ್ರಪ್ರದೇಶ ಎಂಬವರ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ ಅ.ಕ್ರ.  17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಹೊಸ ಪೋಪ್ ‘ಲಿಯೋ XIV’ ಆಗಿ ಆಯ್ಕೆ

ಕ್ಯಾಥೋಲಿಕ್ ಚರ್ಚ್‌ಗೆ ಐತಿಹಾಸಿಕ ಮತ್ತು ಸಂತೋಷದಾಯಕ ಕ್ಷಣದಲ್ಲಿ ಚಿಕಾಗೋದಲ್ಲಿ ಜನಿಸಿದ ಮಿಷನ್ ಮತ್ತು ಸೇವೆಗೆ ಆಳವಾದ ಬದ್ಧತೆಯನ್ನು ಹೊಂದಿರುವ 69 ವರ್ಷ ವಯಸ್ಸಿನ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್
News

ನೂತನ ಯಾಜಕ ಸ್ಟ್ಯಾನಿ ಪಿಂಟೊ ಇವರ ಪ್ರಥಮ ಕೃತಜ್ಞತಾ ದಿವ್ಯ ಬಲಿಪೂಜೆ

ಕಾರ್ಮೆಲೈಟ್ ಸಂಸ್ಥೆಗೆ ಸೂರಿಕುಮೇರು ಬೊರಿಮಾರ್ ಚರ್ಚ್ ನಿಂದ ಪ್ರಥಮ ಯಾಜಕ ಚರ್ಚ್ ಉಪಾಧ್ಯಕ್ಷ, ಕಾರ್ಯದರ್ಶಿ ಹಾಗೂ ಆಯೋಗಗಳ ಸಂಯೋಜಕರಿಂದ ಅಭಿನಂದನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ

You cannot copy content of this page