ಕುಲಶೇಖರ ಚರ್ಚ್ ಬಳಿಯ ಅಂಗಡಿ ಹಿಂಭಾಗದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಅಪಸ್ಮಾರದಿಂದ ಬಳಲುತ್ತಿದ್ದ ಹಾಗೂ ಸ್ಕ್ರ್ಯಾಪ್ ಸಂಗ್ರಹಿಸುತ್ತಿದ್ದ ಶಕ್ತಿನಗರ ನಿವಾಸಿ 46 ವರ್ಷ ಪ್ರಾಯದ ಸುರೇಂದ್ರ ಎಂಬವರ ಕೊಳೆತ ಸ್ಥಿತಿಯಲ್ಲಿದ್ದ ಶವ ಕುಲಶೇಖರ ಚರ್ಚ್ ಬಳಿಯ ಅಂಗಡಿಯೊಂದರ ಹಿಂದೆ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಅಂಗಡಿಯ ಹಿಂಭಾಗದಲ್ಲಿರುವ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು, ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಹ ಥೋರಟ್ ಕೂಡ ಪರಿಶೀಲನೆ ನಡೆಸಿದ್ದಾರೆ.ತನಿಖೆ ನಡೆಯುತ್ತಿದೆ.