May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಇಲ್ಲಿನ ಲಕ್ಕಪ್ಪಕೋಡಿಯಲ್ಲಿ ನೂತನ ರುದ್ರಭೂಮಿಯ ಲೋಕಾರ್ಪಣೆ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣ

ಹುಟ್ಟು ಅಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವಿನ ಮಧ್ಯೆ ನಾವು ಮಾಡಿದ ಪುಣ್ಯದ ಕೆಲಸ ನಮ್ಮನ್ನು ಕಾಪಾಡುತ್ತದೆ. ಇದೂ ಒಂದು ಮೂಲಭೂತ ಸೌಕರ್ಯದ ಭಾಗವಾಗಿದೆ. ಈಗಿನ ಕಾಲಘಟ್ಟದಲ್ಲಿ ರುದ್ರಭೂಮಿಯ ಅವಶ್ಯಕತೆ ಬಹಳಷ್ಟಿದೆ. ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆರವರು ಹೇಳಿದರು. ಅವರು ಮೇ 2ರಂದು ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹುಟ್ಟು ಸಾವಿನಲ್ಲಿ ಘನತೆ ಗೌರವವಿರಬೇಕು. ಈ ನಿಟ್ಟಿನಲ್ಲಿ ಈ ಒಂದು ಹಿಂದೂ ರುದ್ರಭೂಮಿ ನಿರ್ಮಾಣ ಉತ್ತಮ ಬೆಳವಣಿಗೆಯಾಗಿದೆ‌. ಗ್ರಾಮದ ಜನರ ಉದ್ದೇಶ ಈಡೇರಿದಂತಾಗಿದೆ. ಮಾಡುವಂತಹ ಛಲ ನಮ್ಮಲ್ಲಿರಬೇಕು. ಒಮ್ಮತದ ಮನಸ್ಸು ಇದ್ದೆಡೆ ಎಲ್ಲಾ ಕೆಲಸಗಳಲ್ಲಿ ಯಶಸ್ವಿ ಸಾಧ್ಯ ಎಂದರು. ಹಿಂದೂ ರುದ್ರಭೂಮಿಯ  ಅಧ್ಯಕ್ಷ ಪ್ರಫುಲ್ಲ ಆರ್. ರೈ ಕಲ್ಲಾಜೆಗುತ್ತುರವರು ರುದ್ರಭೂಮಿಯನ್ನು ದೀಪಬೆಳಗಿಸಿ ಉದ್ಘಾಟಿಸಿದರು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವಿಂದು ನಿರಾಳರಾಗಿದ್ದೇವೆ. ನಾವು ಆಡಳಿತಕ್ಕೆ ಬಂದ ದಿನದಿಂದ ಮೂಲಭೂತ ಸೌಕರ್ಯಗಳಿಗೆ ಮೊದಲ ಆಧ್ಯತೆ ನೀಡುತ್ತಾ ಬಂದಿದ್ದೇವೆ. ಅದರಂತೆ ರುದ್ರಭೂಮಿ ನಿರ್ಮಾಣಕ್ಕೆ ಚಾಲನೆ ನೀಡಿದೆವು. ಇದೀಗ ಎಲ್ಲರ ಪ್ರಯತ್ನದ ಫಲವಾಗಿ ಸುಸಜ್ಜಿತವಾದ ಹಿಂದೂ ರುದ್ರಭೂಮಿ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಕೇಂದ್ರ, ರಾಜ್ಯ ಸರಕಾರದ ಯಾವುದೇ ಹಣ ಈ ಒಂದು ರುದ್ರಭೂಮಿಗೆ ಬಳಕೆಯಾಗಿಲ್ಲ. ದಾನಿಗಳ ಸಹಕಾರದಿಂದಾಗಿ ಇಷ್ಟೊಂದು ಸುಂದರ ರುದ್ರಭೂಮಿ ನಿರ್ಮಾಣಗೊಂಡಿದೆ. ರುದ್ರಭೂಮಿಗೆ ಮೃತದೇಹವನ್ನು‌ ತರಲು ಇತರ ಕಡೆಗಳಿಂದ ವಾಹನವನ್ನು ತರಿಸಬೇಕಾದ ಸನ್ನಿವೇಶ ಇಲ್ಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮೃತದೇಹ ಸಾಗಿಸಲು ಆ್ಯಂಬುಲೆನ್ಸ್ ಸೇವೆಯನ್ನು ನೀಡುವ ಯೋಚನೆ ಮಾಡಲಾಗಿದ್ದು, ಬಡವರಿಗೆ ಉಚಿತ ಸೇವೆ ನೀಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ  ತಾರನಾಥ ಸಾಲ್ಯಾನ್, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಮ್ಮುಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅಮ್ಮುಂಜೆ,‌ ರುದ್ರಭೂಮಿ  ನಿರ್ಮಾಣ ಸಮಿತಿ  ಕಾರ್ಯಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯ ಮೇಲ್ವಿಚಾರಕರಾದ ಆಶಾ ಪಾರ್ವತಿ, ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಉಪಾಧ್ಯಕ್ಷೆ ಸುಜಾತಾ, ಮಾಣಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ, ಮೆಸ್ಕಾಂ ಅಭಿಯಂತರಾದ ಪ್ರಸಾದ್, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಮೊದಲಾದವರು ಉಪಸ್ಥಿತರಿದ್ದರು.

ಮಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆರವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page