August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದುಬೈ ಡ್ಯೂಟಿ ಫ್ರೀ ಮಿಲ್ಲೇನಿಯಂ ಮಿಲಿನಿಯರ್ ಲಾಟರಿಯಿಂದ ಕಾಸರಗೋಡು ನಿವಾಸಿಗೆ ಒಲಿಯಿತು 8.5 ಕೋಟಿ ರೂಪಾಯಿ

ದುಬೈ ಡ್ಯೂಟಿ ಫ್ರೀ ಮಿಲ್ಲೇನಿಯಂ ಮಿಲಿನಿಯರ್ ಲಾಟರಿ ಖರೀದಿಸಿರುವ ಕಾಸರಗೋಡು ನಿವಾಸಿಯೋರ್ವರಿಗೆ 8.5 ಕೋಟಿ ರೂಪಾಯಿ ಅದೃಷ್ಟ ಒಲಿದಿದೆ. ಸದ್ಯ ಯುಎಇ ಅಜ್ಮಾನ್‌ನಲ್ಲಿ ವಾಸವಾಗಿರುವ ವೇಣುಗೋಪಾಲ್ ಮುಲ್ಲಚ್ಚೇರಿ ಎಪ್ರಿಲ್ 23ರಂದು ದುಬೈ ವಿಮಾನ ನಿಲ್ದಾಣದ ಟರ್ಮಿನಲ್ -2ರ ಒಳಗಿರುವ ಡ್ಯೂಟಿ ಫ್ರೀ ಕೌಂಟರ್‌ನಲ್ಲಿ ಈ ಲಾಟರಿ ಟಿಕೇಟ್ ಖರೀದಿಸಿದ್ದರು. ನಿನ್ನೆ ಲಾಟರಿ ಡ್ರಾ ನಡೆದಿದ್ದು ವೇಣುಗೋಪಾಲ್ ಅವರಿಗೆ ದಾಖಲೆ ಮೊತ್ತದ ಅದೃಷ್ಟ ಒಲಿದಿದೆ.

ವೇಣುಗೋಪಾಲ್ ಅಜ್ಮಾನಿನ ವಾಣಿಜ್ಯ ಸಂಸ್ಥೆಯೊಂದರಲ್ಲಿ ಐಟಿ ಸಪೋರ್ಟ್ ಉದ್ಯೋಗಿ. ಇವರು ಕಳೆದ 15 ವರ್ಷಗಳಿಂದ ಡ್ಯೂಟಿ ಫ್ರೀ ಟಿಕೇಟುಗಳನ್ನು ಖರೀದಿಸಿ ಅದೃಷ್ಟ ಪರೀಕ್ಷಿಸುತ್ತಿದ್ದರು. “ಡ್ರಾ ದಿನದಂದು ದುಬೈ ಡ್ಯೂಟಿ ಫ್ರೀ ಫೇಸ್‌ಬುಕ್ ಫೇಜ್‌ನಲ್ಲಿ ವಿಜೇತರ ಆಯ್ಕೆಯನ್ನು ಲೈವ್ ನೋಡುತ್ತಿದ್ದರಂತೆ. ತನ್ನ ಟಿಕೇಟ್‌ನ ನಂಬರ್ ಅನೌನ್ಸ್ ಮಾಡಿದಾಗ ಏಕಾಏಕಿ ಭ್ರಮಾ ಲೋಕದಲ್ಲಿದ್ದೇನೆ ಎಂದು ಭಾವಿಸಿದ್ದರಂತೆ. ಡ್ಯೂಟಿ ಫ್ರೀ ಲಾಟರಿ ಸಂಸ್ಥೆಯಿಂದ ಅಧಿಕೃತ ಕರೆ ಬಂದಾಗ ವಿಶೇಷ ಸಂತೋಷವಾಯಿತು” ಎಂದು ವೇಣುಗೋಪಲ್ ಜಿಲ್ಲೆಯ ಮಾಧ್ಯಮಗಳಿಗೆ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page