May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಮೇ 11ರಂದು ಕಥೊಲಿಕ್ ಸಭಾ ಕೇಂದ್ರೀಯ ವಾರ್ಷಿಕ ಚುನಾವಣೆ

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಪ್ರಕಟನೆ

 

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಅವಧಿಗೆ ಕೇಂದ್ರೀಯ ವಾರ್ಷಿಕ ಚುನಾವಣೆ ನಾಳೆ ಮೇ 11ರಂದು ಆದಿತ್ಯವಾರ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಷಪ್ಸ್ ಹೌಸ್ ನ ಸಭಾ ಭವನದಲ್ಲಿ ನಡೆಯಲಿದೆ. ಪ್ರಸ್ತುತ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರ ಅವಧಿಯು ನಾಳೆ ಮುಗಿಯಲಿರುವುದರಿಂದ ಈ ಚುನಾವಣೆ ನಡೆಯಲಿದೆ.

ಅಧ್ಯಕ್ಷ, ಉಪಾಧ್ಯಕ್ಷ ಪ್ರಥಮ, ಉಪಾಧ್ಯಕ್ಷ ದ್ವಿತೀಯ, ಪ್ರಧಾನ ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಖಜಾಂಚಿ ಮತ್ತು ಸಹ ಖಜಾಂಚಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಅಧಿಕಾರಿಯಾಗಿ ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಹಾಗೂ ವೀಕ್ಷಣಾಧಿಕಾರಿಯಾಗಿ ಮಾಜಿ ಅಧ್ಯಕ್ಷ ಜೆರಿ ಪೀಟರ್ ರೊಡ್ರಿಗಸ್ ಇವರು ಚುನಾವಣೆಯನ್ನು ನಡೆಸಲಿರುವರು ಎಂದು ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರು ಇಂದು ಮೇ 10ರಂದು ಶನಿವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page