August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಮೇ 11ರಂದು ಕಥೊಲಿಕ್ ಸಭಾ ಕೇಂದ್ರೀಯ ವಾರ್ಷಿಕ ಚುನಾವಣೆ

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಪ್ರಕಟನೆ

 

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಅವಧಿಗೆ ಕೇಂದ್ರೀಯ ವಾರ್ಷಿಕ ಚುನಾವಣೆ ನಾಳೆ ಮೇ 11ರಂದು ಆದಿತ್ಯವಾರ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಷಪ್ಸ್ ಹೌಸ್ ನ ಸಭಾ ಭವನದಲ್ಲಿ ನಡೆಯಲಿದೆ. ಪ್ರಸ್ತುತ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರ ಅವಧಿಯು ನಾಳೆ ಮುಗಿಯಲಿರುವುದರಿಂದ ಈ ಚುನಾವಣೆ ನಡೆಯಲಿದೆ.

ಅಧ್ಯಕ್ಷ, ಉಪಾಧ್ಯಕ್ಷ ಪ್ರಥಮ, ಉಪಾಧ್ಯಕ್ಷ ದ್ವಿತೀಯ, ಪ್ರಧಾನ ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಖಜಾಂಚಿ ಮತ್ತು ಸಹ ಖಜಾಂಚಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಅಧಿಕಾರಿಯಾಗಿ ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಹಾಗೂ ವೀಕ್ಷಣಾಧಿಕಾರಿಯಾಗಿ ಮಾಜಿ ಅಧ್ಯಕ್ಷ ಜೆರಿ ಪೀಟರ್ ರೊಡ್ರಿಗಸ್ ಇವರು ಚುನಾವಣೆಯನ್ನು ನಡೆಸಲಿರುವರು ಎಂದು ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇವರು ಇಂದು ಮೇ 10ರಂದು ಶನಿವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page