August 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆ

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಇಂದು ಮೇ 11ರಂದು ಆದಿತ್ಯವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಆಯ್ಕೆಯಾದರು.

ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ನೂತನ ಪೋಪ್ ಲಿಯೋ 14ರವರ ಚುನಾವಣೆಯನ್ನು ಸ್ಮರಿಸಿ ಅದೇ ರೀತಿ ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಲೋರೆನ್ಸ್ ಡಿಸೋಜ ಸುರತ್ಕಲ್, ದ್ವಿತೀಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್ ಮಡಂತ್ಯಾರ್, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಆಲ್ವಿನ್ ರೊಡ್ರಿಗಸ್ ಮೂಡಬಿದಿರೆ ಅಲಂಗಾರ್, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಲವೀನಾ ಗ್ರೆಟ್ಟಾ ಡಿಸೋಜ ರಾಣಿಪುರ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಮಾಜಿ ಅಧ್ಯಕ್ಷ ಲ್ಯಾನ್ಸಿ ಡಿಕುನ್ಹಾ ಚುನಾವಣಾಧಿಕಾರಿಯಾಗಿ ಮತ್ತು ಜೆರಿ ಪೀಟರ್ ರೊಡ್ರಿಗಸ್ ಚುನಾವಣಾ ವೀಕ್ಷಣಾಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು. ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಮಾಜಿ ಕೇಂದ್ರೀಯ ಅಧ್ಯಕ್ಷರುಗಳಾದ ವಾಲ್ಟರ್ ಡಿಸೋಜ, ಮಾರಿಟೊ ಸಿಕ್ವೇರಾ, ಎಲ್.ಜೆ. ಫೆರ್ನಾಂಡಿಸ್, ಜೆರಾಲ್ಡ್ ಡಿಕೋಸ್ತ, ಜೆರಿ ಪೀಟರ್ ರೊಡ್ರಿಗಸ್, ಆಂಡ್ರು ನೊರೊನ್ಹಾ, ಲ್ಯಾನ್ಸಿ ಡಿಕುನ್ಹಾ, ನೈಜಿಲ್ ಪಿರೇರಾ, ಅನಿಲ್ ಲೋಬೊ, ಪ್ಲೇವಿ ಡಿಸೋಜ,  ಪಾವ್ಲ್ ರೋಲ್ಫಿ ಡಿಕೋಸ್ತ, ಸ್ಟ್ಯಾನಿ ಲೋಬೊ, ವಲಯ ಅಧ್ಯಕ್ಷರುಗಳಾದ ರೋಷನ್ ಬೊನಿಫಾಸ್ ಮಾರ್ಟಿಸ್, ಲಿಯೋ ಸಿಕ್ವೇರಾ, ಸ್ಟ್ಯಾನಿ ಮಿರಾಂದ, ಆಲ್ಬರ್ಟ್ ಸುನಿಲ್ ಮೊನಿಸ್, ಜೋನ್ ಲಸ್ರಾದೊ, ಐಡಾ ಫುಡ್ತಾದೊ, ಡೋಲ್ಫಿ ಡಿಸೋಜ, ಜೆರಾಲ್ಡ್ ಮಸ್ಕರೇನ್ಹಸ್ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

You may also like

News

ಸೆಪ್ಟೆಂಬರ್ 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬಾಕಿ ಉಳಿದಿರುವ ರಾಜಿಯಾಗಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ
News

27 ವರ್ಷಗಳ ಸೇವೆಯ ಬಳಿಕ ಜೀವನ್ ಸಂತೋಷ್ ಮಾರ್ಟಿಸ್‌ ಅವರು KSRTC ಟ್ರಾಫಿಕ್ ಕಂಟ್ರೋಲರ್ ಹುದ್ದೆಗೆ ಬಡ್ತಿ

KSRTC ಪುತ್ತೂರು ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾರ್ಟಿಸ್ ಕುಟುಂಬದ ಜೀವನ್ ಸಂತೋಷ್ ಮಾರ್ಟಿಸ್ ಅವರು ಟ್ರಾಫಿಕ್ ಕಂಟ್ರೋಲರ್ (ಸಂಚಾರ ನಿಯಂತ್ರಕ)

You cannot copy content of this page