June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಹನದಲ್ಲಿ ವಕೀಲೇತರರು “ವಕೀಲರ ಚಿಹ್ನೆ” ಸ್ಟಿಕ್ಕರ್ ಬಳಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಅಕ್ರಮದ ವಿರುದ್ಧ ಮಾಹಿತಿ ನೀಡುವಂತೆ ವಕೀಲರ ಪರಿಷತ್‌ ಮನವಿ

ವಕೀಲರಲ್ಲದವರೂ ತಮ್ಮ ಖಾಸಗಿ ಯಾ ವಾಣಿಜ್ಯ ವಾಹನಗಳಲ್ಲಿ “ವಕೀಲರ ಚಿಹ್ನೆ” ಸ್ಟಿಕ್ಕರ್ ಬಳಸುತ್ತಿರುವುದು ನಮ್ಮ ಗಮನಕ್ಕೆ ಬಂದರೆ, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಕೆಲವೆಡೆ ವಾಹನಗಳಲ್ಲಿ ವಕೀಲರಲ್ಲದವರೂ ವಕೀಲರ ಚಿಹ್ನೆ ಬಳಸುತ್ತಿರುವ ದೂರುಗಳು ಕೇಳಿಬಂದಿದೆ. ಅಂಥವರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೂ ಇಂತಹ ಘಟನೆಗಳು ಮರುಕಳಿಸಿದರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೆಎಸ್‌ಬಿಸಿ ಮುನ್ನೆಚ್ಚರಿಕೆ ನೀಡಿದೆ. ಇಂತಹ ಅಕ್ರಮದ ವಿರುದ್ಧ ಮಾಹಿತಿ ನೀಡುವಂತೆ ವಕೀಲರ ಪರಿಷತ್‌ ಸಾರ್ವಜನಿಕರಿಗೆ ಮನವಿ ಮಾಡಿದೆ. ಈ ಕುರಿತು ವಕೀಲರ ಪರಿಷತ್ತು ಅಧ್ಯಕ್ಷ ಎಸ್.ಎಸ್. ಮಿಟ್ಟಲಕೋಡ ಅವರು ಪ್ರಕಟಣೆ ಹೊರಡಿಸಿದ್ದಾರೆ.

ತಾವು ವಕೀಲರು ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದು, ಅಂತಹವರು ವಕೀಲರ ಸಮುದಾಯದ ಹೆಸರು ದುರುಪಯೋಗ ಹಾಗೂ ವಕೀಲ ವೃತ್ತಿಗೆ ಅವಮಾನ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಸಂತ್ರಸ್ತರು ಯಾ ಸಾರ್ವಜನಿಕರು ಮಾಹಿತಿ ನೀಡುವಂತೆ ಕೋರಲಾಗಿದೆ. ವಾಹನಗಳ ಸಂಖ್ಯೆ ಅಥವಾ ಫೋಟೋವನ್ನು ಪರಿಷತ್ತಿನ ಈ ಕೆಳಗಿನ ಇ-ಮೇಲ್ ಗೆ ಕಳುಹಿಸಿಕೊಡಲು ಸೂಚಿಸಲಾಗಿದ್ದು, ಮಾಹಿತಿಯನ್ನು ಗೌಪ್ಯವಾಗಿಟ್ಟುಕೊಂಡು ಆರೋಪಿಗಳ ವಿರುದ್ಧ ಕ್ರಮ ಜರುಗಿಸುವ ಭರವಸೆಯನ್ನು ಪರಿಷತ್ತು ನೀಡಿದೆ.

Email: [email protected]

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page