February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು, ಮಾಜಿ ಶಾಸಕ ಸಂಜೀವ ಮಟಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಒಳಗೊಂಡ ಬಿಜೆಪಿ ನಿಯೋಗ ಪೊಲೀಸರಿಗೆ ದೂರು ನೀಡಿದೆ.

ದೇಶದ ಪ್ರಧಾನಿಯವರನ್ನು ಅಣಕಿಸುವ ದೇಶದ ಸಹೋದರತೆಗೆ, ಸಾರ್ವಭೌಮತೆಗೆ ಕಾರ್ಕೋಟಕ ವಿಷ” “ಇವರು ವಿಶ್ವ ಗುರು ಅಲ್ಲಾ, ವಿಷ ಗುರು” ಎಂಬಿತ್ಯಾದಿ ಹಾಗೂ ಅನೇಕ ಪೋಸ್ಟರ್ ಗಳನ್ನು ಅವರು ತಮ್ಮ “Amala Ramachandra” ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದು, ಇದು ದೇಶದ ಉನ್ನತ ಹುದ್ದೆಯಲ್ಲಿರುವ ಪ್ರಧಾನಿಯವರಿಗೆ ಮಾಡಿದ ಅವಮಾನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೀಳು ಭಾವನೆಯನ್ನು ಹಬ್ಬಿಸುವುದು, ಪ್ರಚಾರ ಮಾಡುವುದು ದೇಶದ ಭದ್ರತೆಯ ಬಗ್ಗೆ ಕೀಳು ಭಾವನೆಯನ್ನು ಬಿಂಬಿಸುವುದು ದೇಶ ದ್ರೋಹದ ಕೆಲಸವಾಗಿರುತ್ತದೆ.

ಇದನ್ನು ನೋಡಿದ ಭಾರತೀಯ ಜನತಾ ಪಾರ್ಟಿಯ ಅನೇಕ ಕಾರ್ಯಕರ್ತರಿಗೆ ಬೇಸರ ಉಂಟಾಗಿರುತ್ತದೆ. ಅಲ್ಲದೆ ದೇಶದ ಪ್ರಧಾನಿಗೆ ಇದು ಅವಮಾನ ಮಾಡಿದ್ದಾಗಿರುತ್ತದೆ ಎಂದು ಹೇಳಲಾಗಿದೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page