July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿಯಲ್ಲಿ ಮಹಿಳಾ ಗ್ರಾಮ ಸಭೆ

ಮಹಿಳೆಯರು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು – ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ

ಮಹಿಳೆಯರ ಮತ್ತು ಮಕ್ಕಳ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಬಹಳಷ್ಷು ಕಾಳಜಿ ವಹಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ನಡೆದ ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸವಲತ್ತುಗಳು ಕೂಡಾ ಮಹಿಳೆಯರಿಗೇ ಬರುತ್ತವೆ. ಮಹಿಳೆಯರು ಇದರ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾರವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಪ್ರಮುಖ ಮಾಹಿತಿಯನ್ನು ನೀಡಿದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಮಿತ್ರಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ  ಅಧಿಕಾರಿ ಗಿರಿಜಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

You may also like

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು

You cannot copy content of this page