February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿಯಲ್ಲಿ ಮಹಿಳಾ ಗ್ರಾಮ ಸಭೆ

ಮಹಿಳೆಯರು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು – ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ

ಮಹಿಳೆಯರ ಮತ್ತು ಮಕ್ಕಳ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಬಹಳಷ್ಷು ಕಾಳಜಿ ವಹಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ನಡೆದ ಮಹಿಳಾ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸವಲತ್ತುಗಳು ಕೂಡಾ ಮಹಿಳೆಯರಿಗೇ ಬರುತ್ತವೆ. ಮಹಿಳೆಯರು ಇದರ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾರವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಪ್ರಮುಖ ಮಾಹಿತಿಯನ್ನು ನೀಡಿದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಮಿತ್ರಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ  ಅಧಿಕಾರಿ ಗಿರಿಜಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

You may also like

News

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಸಫಾನ್ ಹುಸೇನ್ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ ಆರೋಪಿ ತಲೆಮರೆಸಿಕೊಳ್ಳಲು, ನಕಲಿ ದಾಖಲೆ ಸೃಷ್ಟಿಸಲು ಮತ್ತು ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದವರ ಮೇಲೂ ತನಿಖೆ 
News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ

You cannot copy content of this page