May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಡವರ ಏಳಿಗೆಗೆ ಸದಾ ಬದ್ಧ – ಸಿಎಂ ಸಿದ್ಧರಾಮಯ್ಯ

ಎಲ್ಲ ಜಾತಿ, ಧಮ೯ದವರ ಬಡವರನ್ನು ಸರಕಾರ ಮೇಲಕ್ಕೆತ್ತಲು ಸರಕಾರ ಹಲವಾರು ಕಾಯ೯ಕ್ರಮಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಏನೇ ಟೀಕೆಗಳು ಬಂದರೂ ಸರಕಾರ ಯೋಜನೆಗಳನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅವರು ಮೇ 16ರಂದು ಶುಕ್ರವಾರ ಉಳ್ಳಾಲ ಸೈಯ್ಯದ್ ಮದನಿ ದಗಾ೯ ಉರೂಸ್ ಕಾಯ೯ಕ್ರಮದಲ್ಲಿ ಸಾಮಾಜಿಕ ಭಾವೈಕ್ಯತಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ದೇವರಾಜ ಅರಸು ನಂತರ ಕನಾ೯ಟಕದಲ್ಲಿ 5 ವಷ೯ ಪೂಣ೯ಗೊಳಿಸಿದ ಮುಖ್ಯಮಂತ್ರಿ ಎಂಬ ಕೀತಿ೯ ತನಗೆ ಹೆಮ್ಮೆ ಇದೆ. ಇದನ್ನು ಜನತೆಯ ಏಳಿಗೆಗೆ ಬಳಸುತ್ತಿದ್ದೇನೆ ಎಂದರು.

ವೈವಿಧ್ಯತೆಯಲ್ಲಿ ಏಕತೆ ಕಾಣಬೇಕು. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದೇವೆ. ಸಮಾನ ಅವಕಾಶ ಒದಗಿಸಿ, ಎಲ್ಲರಿಗೂ ನ್ಯಾಯ ಒದಗಿಸಿದಾಗ ಸಂವಿಧಾನ ಯಶಸ್ಸು. ಇದೇ ಹಾದಿಯಲ್ಲಿ ಸರಕಾರ ನಡೆಯುತ್ತಿದೆ ಎಂದು ಅವರು ಹೇಳಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು. ಸ್ಪೀಕರ್ ಯು.ಟಿ. ಖಾದರ್, ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page