ಬಂಟ್ವಾಳ ನ್ಯಾಯಾಧೀಶರಾದ ಭಾಗ್ಯಮ್ಮರವರಿಗೆ ಗೌರವಾಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ
ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಬಂಟ್ವಾಳ ಇಲ್ಲಿ ಕರ್ತವ್ಯ ನಿರ್ವಹಿಸಿದ ನ್ಯಾಯಧೀಶರಾದ ಭಾಗ್ಯಮ್ಮರವರಿಗೆ ಹುಣಸೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದು ಈ ನಿಟ್ಟಿನಲ್ಲಿ ವಕೀಲರ ಸಂಘ (ರಿ.) ಬಂಟ್ವಾಳ ಇವರ ವತಿಯಿಂದ ಗೌರವಾಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಇಂದು ಮೇ 22ರಂದು ಗುರುವಾರ ನ್ಯಾಯಾಲಯದಲ್ಲಿ ನಡೆಯಿತು.


ಭಾಗ್ಯಮ್ಮರವರು ಮೂರು ವರ್ಷಗಳ ಕಾಲ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ವೇಳೆ ತನ್ನನ್ನು ಸನ್ಮಾನಿಸಿದ ಬಾರ್ ಅಸೋಸಿಯೇಷನ್ ಗೆ ನ್ಯಾಯಧೀಶೆ ಭಾಗ್ಯಮ್ಮ ಧನ್ಯವಾದ ಸಲ್ಲಿಸಿದರು. ವಕೀಲರ ಸಂಘ (ರಿ.) ಬಂಟ್ವಾಳದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ.ರವರು ನ್ಯಾಯಾಧೀಶೆ ಭಾಗ್ಯಮ್ಮರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್., ಪ್ರದಾನ ಕಾರ್ಯದರ್ಶಿ ಕೆ. ನರೇಂದ್ರ ನಾಥ್ ಭಂಡಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ದಯಾನಂದ ರೈ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಕೆ. ನರೇಂದ್ರ ಭಂಡಾರಿ ಧನ್ಯವಾದ ಸಮರ್ಪಿಸಿದರು. ಯುವ ವಕೀಲರಾದ ಸ್ವರ್ಣ ಗೌರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಕಿರಿಯ ವಕೀಲ ಮಿತ್ರರು ಉಪಸ್ಥಿತರಿದ್ದರು.




