November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ವಿಮಾನ ದುರಂತ – ಜಿಲ್ಲಾಡಳಿತ ಶ್ರದ್ಧಾಂಜಲಿ

2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ  ವಿಮಾನ  ದುರಂತ ಘಟನೆಯ ಸ್ಮರಣಾರ್ಥ ಇಂದು ಮೇ 22ರಂದು ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್‍ನಲ್ಲಿ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ರವರು ಗೌರವ ಸಲ್ಲಿಸಿದರು. ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಪ್ರಾಧಿಕಾರದ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕರು ಕೂಡ ಆಗಮಿಸಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page