November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಅದ್ದೂರಿಯಾಗಿ ನಡೆದ ಬೇಸಿಗೆ ರಜಾ ಶಿಬಿರ – 2025

ಮಾಣಿ ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿ ಅಧೀನದ ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಆರು ದಿನಗಳ ಬೇಸಿಗೆ ರಜಾ ಶಿಬಿರ – 2025 ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಯಿತು. ಶಿಬಿದವನ್ನು ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಉದ್ಘಾಟಿಸಿದರು, ಹಸೈನಾರ್ ಸ‌ಅದಿ ಪೆರ್ಲ, ನಾಸಿರ್ ಸ‌ಅದಿ ನೇರಳಕಟ್ಟೆ, ಹನೀಫ್ ಸ‌ಅದಿ ಸೆರ್ಕಳ, ಮುಸ್ತಫಾ ಸ‌ಅದಿ ರಿಯಾದ್, ತರಗತಿಗಳನ್ನು ನಡೆಸಿಕೊಟ್ಟರು.

ಶಿಬಿರದಲ್ಲಿ ಮೋಟಿವೇಶನ್ ಸಹಿತ ವಿವಿಧ ತರಗತಿಗಳು, ಕ್ವಿಝ್, ಸ್ಪರ್ಧೆಗಳೊಂದಿಗೆ ಬಹುಮಾನ ಮತ್ತು ಸ್ಮರಣಿಕೆ ವಿತರಣೆ ನಡೆಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು. ಮದ್ರಸಾ ಸಮಿತಿಯ ಚೆಯರ್‌ಮೆನ್ ಹನೀಫ್ ಸಂಕ, ಕನ್ವೀನರ್ ಅಝೀಂ ನೆಲ್ಲಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಸೀದಿ ಪ್ರಧಾನ ಕಾರ್ಯದರ್ಶಿ ಅಮೀರುದ್ದೀನ್, ಸದಸ್ಯರುಗಳಾದ ಅಬ್ದುಲ್ ಕರೀಂ ನೆಲ್ಲಿ, ಹಂಝ ಕಾಯರಡ್ಕ, ಅಶ್ರಫ್ ಸಖಾಫಿ, ಮದ್ರಸಾ ಸಮಿತಿ ಸದಸ್ಯರುಗಳಾದ ನಾಸಿರ್ ಬದ್ರಿಯಾ ಗ್ರೌಂಡ್, ಅಬ್ದುರ್ರಹ್ಮಾನ್ ಪುತ್ತು, ಇಬ್ರಾಹಿಂ ನೆಲ್ಲಿ ಮುಂತಾದವರು ಉಪಸ್ಥಿತರಿದ್ದರು.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page