May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಪಿಲಿಕುಳದಲ್ಲಿ ಸಾಕಷ್ಟು ಲೋಪದೋಷಗಳನ್ನು ಪತ್ತೆ ಹಚ್ಚಿದ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ಕೇಂದ್ರ ಕಚೇರಿಗೆ ಸಮಗ್ರ ವರದಿ ರವಾನೆ ?

ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ಮೇ 23ರಂದು ಶುಕ್ರವಾರ ದಿಡೀರ್ ಪಿಲಿಕುಳಕ್ಕೆ ಭೇಟಿ ನೀಡಿ ಅಲ್ಲಿ ತಪಾಸಣೆ ನಡೆಸಿದ್ದಾರೆ. ತಪಾಸಣೆ ನಡೆಸಿರುವಾಗ ಬಹಳಷ್ಟು ಲೋಪ ದೋಷಗಳನ್ನು ಪತ್ತೆ ಹಚ್ಚಿದ್ದಾರೆ.

1️. ಲೀಸಿಗೆ ಕೊಟ್ಟ ಹಲವು ಸಂಸ್ಥೆಗಳಿಂದ ಪಿಲಿಕುಳ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೇ ಇರುವುದು ಕಂಡು ಬಂದಿದೆ.

2️. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಕೂಡ, ಪಿಲಿಕುಳ ಪ್ರಾಧಿಕಾರವು ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬಂದಿದೆ.

3️. ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಕೂಡ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ.

4️. ಪಿಲಿಕುಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ತಪಾಸಣೆಯಲ್ಲಿ ಕಂಡು ಬಂದಿದೆ.

5️. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪಗಳು ಕಂಡುಬಂದಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿಯನ್ನು ನಿವೇದಿಸಲಾಗುವುದು ಎಂಬುದಾಗಿ ಕುಮಾರಚಂದ್ರ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಪ್ರಭಾರ) ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಇವರು ತಿಳಿಸಿದ್ದಾರೆ.

ನಡೆಸಿದ ತಪಾಸಣೆಯಲ್ಲಿ ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ.ರವರು ಹಾಗೂ ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ. ಎನ್. ರವರು ಇತರ ಸಿಬ್ಬಂದಿಯವರೊಂದಿಗೆ ಇದ್ದರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page