August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಸೂರಿಕುಮೇರು ಬೊರಿಮಾರ್ ಘಟಕಕ್ಕೆ ನೂತನ ಅಧ್ಯಕ್ಷ ರಿಯೋನ್ ಮೊನಿಸ್ ಹಾಗೂ ಉಪಾಧ್ಯಕ್ಷೆಯಾಗಿ ವಿಶಾ ಡಿಸೊಜ ಸರ್ವಾನುಮತದಿಂದ ಆಯ್ಕೆ

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ಇದರ ICYM ಸೂರಿಕುಮೇರು ಬೊರಿಮಾರ್ ಘಟಕಕ್ಕೆ 2025-26ನೇ ಸಾಲಿನ ವಾರ್ಷಿಕ ಚುನಾವಣೆಯು ಚರ್ಚ್ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜರವರ ಮಾರ್ಗದರ್ಶನದಲ್ಲಿ ಮೇ 18ರಂದು ಆದಿತ್ಯವಾರ ನಡೆಯಿತು. ನೂತನ ಅಧ್ಯಕ್ಷರಾಗಿ ರಿಯೋನ್ ಸ್ನೇಹಿತ್ ಮೊನಿಸ್ ಹಾಗೂ ಉಪಾಧ್ಯಕ್ಷೆಯಾಗಿ ವಿಶಾ ಡಿಸೋಜ ಸರ್ವಾನುವತದಿಂದ ಆಯ್ಕೆಯಾದರು.

ಪದಾಧಿಕಾರಿಗಳಾಗಿ ಕಾರ್ಯದರ್ಶಿ ಸವಿತಾ ಪಿಂಟೊ, ಸಹ ಕಾರ್ಯದರ್ಶಿ ಮೆಲಿಟಾ ಪಾಯ್ಸ್, ಖಜಾಂಚಿ ಕಿರಣ್ ಸಿಕ್ವೇರಾ, ಆಮ್ಚೊ ಯುವಕ್ ಪ್ರತಿನಿಧಿ ವಿನಿಶಾ ಮಸ್ಕರೇನ್ಹಸ್, ರೆಡ್ ಡ್ರಾಪ್ ಪ್ರತಿನಿದಿ ಅರ್ವಿನ್ ಪಿಂಟೊ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪ್ರತಿನಿದಿ ಲೆಸ್ಟರ್ ಡಿಕುನ್ಹಾ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷೆ ಪ್ರಿನ್ಸಿಟಾ ಡಿಸೋಜ ಆಗಿರುತ್ತಾರೆ. ಇವರೆಲ್ಲರಿಗೂ ಇಂದು ಮೇ 25ರಂದು ಆದಿತ್ಯವಾರ ಪೂಜೆಯ ಬಳಿಕ ಪ್ರಮಾಣ ವಚನ ಬೋಧಿಸಲಾಯಿತು.

ಆಯ್ಕೆಗೊಂಡ ಎಲ್ಲರಿಗೂ ಚರ್ಚ್ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್, ಆಯೋಗಗಳ ಸಂಯೋಜಕ ಎಲಿಯಾಸ್ ಪಿರೇರಾ ಹಾಗೂ ಕಥೊಲಿಕ್ ಸಭಾ ಅಧ್ಯಕ್ಷ ತೊಮಸ್ ಲಸ್ರಾದೊ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page