January 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಸೂರಿಕುಮೇರು ಬೊರಿಮಾರ್ ಘಟಕಕ್ಕೆ ನೂತನ ಅಧ್ಯಕ್ಷ ರಿಯೋನ್ ಮೊನಿಸ್ ಹಾಗೂ ಉಪಾಧ್ಯಕ್ಷೆಯಾಗಿ ವಿಶಾ ಡಿಸೊಜ ಸರ್ವಾನುಮತದಿಂದ ಆಯ್ಕೆ

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ಇದರ ICYM ಸೂರಿಕುಮೇರು ಬೊರಿಮಾರ್ ಘಟಕಕ್ಕೆ 2025-26ನೇ ಸಾಲಿನ ವಾರ್ಷಿಕ ಚುನಾವಣೆಯು ಚರ್ಚ್ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜರವರ ಮಾರ್ಗದರ್ಶನದಲ್ಲಿ ಮೇ 18ರಂದು ಆದಿತ್ಯವಾರ ನಡೆಯಿತು. ನೂತನ ಅಧ್ಯಕ್ಷರಾಗಿ ರಿಯೋನ್ ಸ್ನೇಹಿತ್ ಮೊನಿಸ್ ಹಾಗೂ ಉಪಾಧ್ಯಕ್ಷೆಯಾಗಿ ವಿಶಾ ಡಿಸೋಜ ಸರ್ವಾನುವತದಿಂದ ಆಯ್ಕೆಯಾದರು.

ಪದಾಧಿಕಾರಿಗಳಾಗಿ ಕಾರ್ಯದರ್ಶಿ ಸವಿತಾ ಪಿಂಟೊ, ಸಹ ಕಾರ್ಯದರ್ಶಿ ಮೆಲಿಟಾ ಪಾಯ್ಸ್, ಖಜಾಂಚಿ ಕಿರಣ್ ಸಿಕ್ವೇರಾ, ಆಮ್ಚೊ ಯುವಕ್ ಪ್ರತಿನಿಧಿ ವಿನಿಶಾ ಮಸ್ಕರೇನ್ಹಸ್, ರೆಡ್ ಡ್ರಾಪ್ ಪ್ರತಿನಿದಿ ಅರ್ವಿನ್ ಪಿಂಟೊ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪ್ರತಿನಿದಿ ಲೆಸ್ಟರ್ ಡಿಕುನ್ಹಾ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷೆ ಪ್ರಿನ್ಸಿಟಾ ಡಿಸೋಜ ಆಗಿರುತ್ತಾರೆ. ಇವರೆಲ್ಲರಿಗೂ ಇಂದು ಮೇ 25ರಂದು ಆದಿತ್ಯವಾರ ಪೂಜೆಯ ಬಳಿಕ ಪ್ರಮಾಣ ವಚನ ಬೋಧಿಸಲಾಯಿತು.

ಆಯ್ಕೆಗೊಂಡ ಎಲ್ಲರಿಗೂ ಚರ್ಚ್ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್, ಆಯೋಗಗಳ ಸಂಯೋಜಕ ಎಲಿಯಾಸ್ ಪಿರೇರಾ ಹಾಗೂ ಕಥೊಲಿಕ್ ಸಭಾ ಅಧ್ಯಕ್ಷ ತೊಮಸ್ ಲಸ್ರಾದೊ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

You may also like

News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ
News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ

You cannot copy content of this page