November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಳತ್ತಮಜಲು ರಹಿಮಾನ್ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ – AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಮೇ 27ರಂದು ಮಂಗಳವಾರ ದುಷ್ಕರ್ಮಿಗಳು ವ್ಯವಸ್ಥಿತ ಹಾಗೂ ಪೂರ್ವ ಯೋಜಿತವಾಗಿ ಹತ್ಯೆ ಮಾಡಿದ್ದು, ಹತ್ಯೆಯ ಸಂಚುದಾರರು ಈ ಹಿಂದೆಯೇ ಬಹಿರಂಗವಾಗಿ ಘೋಷಿಸಿದ್ದು ಪೊಲೀಸರು ಕೂಡಲೇ ಹತ್ಯೆಯಲ್ಲಿ ಭಾಗಿಯಾದ ನೇರ ಮತ್ತು ಪರೋಕ್ಷ ಕೃತ್ಯದಾರರನ್ನು ಬಂಧಿಸಬೇಕಿದೆ.

ಅಮಾಯಕ ವ್ಯಕ್ತಿಯ ಹತ್ಯೆ ಖಂಡನೀಯ. ಹತ್ಯೆದಾರರು ಈ ಕೊಲೆಯನ್ನು ಮತೀಯ ದ್ವೇಷದಿಂದ ಕೊಲೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿ ಯಾರಿಂದಲೂ ದ್ವೇಷಕ್ಕೆ ಗುರಿಯಾಗಿದ್ದ ವ್ಯಕ್ತಿ ಅಲ್ಲ. ಮರಳು ಸಾಗಣಿಕೆ ಪೂರೈಸಲು ಬರ ಮಾಡಿಕೊಂಡು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳ ಇಂತಹ ನಡೆ ಖಂಡನೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ದುಷ್ಕರ್ಮಿಗಳನ್ನು ಶೀಷ್ರ ಬಂಧಿಸುವಂತೆ AICU ರಾಜ್ಯಾಧ್ಯಕ್ಷ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ.

You may also like

News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು
News

ಮಹಿಳಾ ವೈಭವ – 2026: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ

ಮಹಿಳಾ ಸಬಲೀಕರಣಕ್ಕೆ ಸುವರ್ಣ ಅಧ್ಯಾಯ – ಚಂಚಲ ತೇಜೋಮಯ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ಮಂಗಳೂರಿನ ಪುರಭವನದಲ್ಲಿ

You cannot copy content of this page