August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಳತ್ತಮಜಲು ರಹಿಮಾನ್ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ – AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಮೇ 27ರಂದು ಮಂಗಳವಾರ ದುಷ್ಕರ್ಮಿಗಳು ವ್ಯವಸ್ಥಿತ ಹಾಗೂ ಪೂರ್ವ ಯೋಜಿತವಾಗಿ ಹತ್ಯೆ ಮಾಡಿದ್ದು, ಹತ್ಯೆಯ ಸಂಚುದಾರರು ಈ ಹಿಂದೆಯೇ ಬಹಿರಂಗವಾಗಿ ಘೋಷಿಸಿದ್ದು ಪೊಲೀಸರು ಕೂಡಲೇ ಹತ್ಯೆಯಲ್ಲಿ ಭಾಗಿಯಾದ ನೇರ ಮತ್ತು ಪರೋಕ್ಷ ಕೃತ್ಯದಾರರನ್ನು ಬಂಧಿಸಬೇಕಿದೆ.

ಅಮಾಯಕ ವ್ಯಕ್ತಿಯ ಹತ್ಯೆ ಖಂಡನೀಯ. ಹತ್ಯೆದಾರರು ಈ ಕೊಲೆಯನ್ನು ಮತೀಯ ದ್ವೇಷದಿಂದ ಕೊಲೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿ ಯಾರಿಂದಲೂ ದ್ವೇಷಕ್ಕೆ ಗುರಿಯಾಗಿದ್ದ ವ್ಯಕ್ತಿ ಅಲ್ಲ. ಮರಳು ಸಾಗಣಿಕೆ ಪೂರೈಸಲು ಬರ ಮಾಡಿಕೊಂಡು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳ ಇಂತಹ ನಡೆ ಖಂಡನೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ದುಷ್ಕರ್ಮಿಗಳನ್ನು ಶೀಷ್ರ ಬಂಧಿಸುವಂತೆ AICU ರಾಜ್ಯಾಧ್ಯಕ್ಷ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page