November 5, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣದ ಮೂವರು ಆರೋಪಿಗಳ ಸೆರೆ

ಪಿಕಪ್ ಚಾಲಕ ಅಬ್ದುಲ್ ರೆಹಮಾನ್ ಯಾನೆ ರಹೀಂ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳ ಶೀಘ್ರ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಿ 5 ತನಿಖಾ ತಂಡಗಳನ್ನು ರಚಿಸಿ ಆರೋಪಿಯ ಪತ್ತೆ ಕಾರ್ಯವನ್ನು ನಡೆಸಲಾಗಿದೆ. ಆದರಂತೆ ಮೇ 29ರಂದು ಗುರುವಾರ ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ದೀಪಕ್, ಪ್ರಥ್ವಿರಾಜ್ ಹಾಗೂ ಚಿಂತನ್ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಅವರ ವಿಚಾರಣೆಯನ್ನು ನಡೆಸಲಾಗುತ್ತದೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ವಶಕ್ಕೆ ಪಡೆಯಲಾಗಿರುವ ಆರೋಪಿಗಳ ವಿವರ :-

1 ದೀಪಕ್ (21) ತಂದೆ ದಿ.ಯೋಗಿಶ್ ಪೂಜಾರಿ, ವಾಸ: ಮುಂಡರಕೋಡಿ ಮನೆ, ಕುರಿಯಾಳ ಗ್ರಾಮ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ.

2 ಪೃಥ್ವಿರಾಜ್ (21) ತಂದೆ: ಪ್ರಮೋದ್ ರಾಜ್ ಜೋಗಿ, ವಾಸ: ಭದ್ರಾಕಾಳಿ ದೇವಸ್ಥಾನ ಹತ್ತಿರ, ಶಿವಾಜಿ ನಗರ, ಅಮ್ಮುಂಜೆ ಗ್ರಾಮ ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.

3 ಚಿಂತನ್ (19) ತಂದೆ: ಸುರೇಶ ಬೆಳ್ಳಡ, ವಾಸ: ಶಿವಾಜಿನಗರ ಮನೆ, ಅಮ್ಮುಂಜೆ ಗ್ರಾಮ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣಾ ಆ.ಕ. 54/2025 00: 191[1], 191[2], 191[3], 118[1]. 118 [2], 109, 103 3 190 BNS 2023 20 ಪ್ರಕರಣ ದಾಖಲಾಗಿರುತ್ತದೆ.

You may also like

News

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಎತ್ತರ ಜಿಗಿತದಲ್ಲಿ ಅಶ್ಮಿತಾ ಸುವಾರಿಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಥೊಲಿಕ್ ಸಭಾ ಸೂರಿಕುಮೇರು ಘಟಕದಿಂದ ಅಭಿನಂದನೆ ಸೂರಿಕುಮೇರು ಚರ್ಚ್ ವ್ಯಾಪ್ತಿಯ ಅರುಣ್ ಮತ್ತು ಪ್ರೀತಿ ಸುವಾರಿಸ್ ದಂಪತಿ ಪುತ್ರಿ ಅಶ್ಮಿತಾ ಸುವಾರಿಸ್ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದ
News

Bethany Champion Program 2025 – A Celebration of Leadership and Holistic Growth

The Bethany Champion Program was successfully hosted at Saint Raymond’s English Medium School Vamanjoor, on November 4. The event brought

You cannot copy content of this page