November 7, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇರಳದಿಂದ ಕರ್ನಾಟಕಕ್ಕೆ ಕಂಟೈನರ್ ನಲ್ಲಿ ಅಕ್ರಮ ಜಾನುವಾರು ಸಾಗಾಟ – ಪ್ರಕರಣ ದಾಖಲು

ಜಾನುವಾರುಗಳನ್ನು ರಕ್ಷಿಸಿ ಗೋ ಶಾಲೆಗೆ ನೀಡಿದ ಪೊಲೀಸರು

ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಸ್ತೆಗಳಲ್ಲಿ ಜೂನ್ 1ರಂದು ಹೆಚ್ಚು ಚೆಕ್ ಪೋಸ್ಟ್‌ಗಳನ್ನು ತೆರೆದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್‌ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಿ ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದೆ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಹೀಗೆ ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿರುತ್ತದೆ. ಸದರಿ ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ.

 

You may also like

News

ಮಹಮ್ಮದ್ ಶರೀಫ್ ರವರಿಗೆ ಕರ್ನಾಟಕ ರತ್ನಶ್ರೀ ಪ್ರಶಸ್ತಿ

ಸರ್ಕಾರಿ ಶಾಲೆಗಳಿಗೆ ಉಚಿತ ತರಕಾರಿ ನೀಡಿ ಮಾನವೀಯತೆ ಮೆರೆದ ಮೆಲ್ಕಾರಿನ ವ್ಯಾಪಾರಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಗಳನ್ನು ನೀಡಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದತ್ತ ಅನನ್ಯ ಸೇವೆ
News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ – ಧರ್ಮಸ್ಥಳದಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

ಬರೆ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಗೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ

You cannot copy content of this page