October 29, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ನಗರ ಪೊಲೀಸ್ ರಿಂದ ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ

ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 02 ಮತ್ತು 03ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂಪಾಯಿ 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ.

ಅಲ್ಲದೇ ಇಂದು ಜೂನ್ 03ರಂದು ಮಂಗಳವಾರ ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ, ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಟ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಹಾಜರಿದ್ದವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಸಹ ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ ಎಂದು ಸಿಟಿ ಪೊಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.

You may also like

News

ಸಿ.ಒ.ಡಿ.ಪಿ. ಹಾಗೂ ಬಾಳೆಪುಣಿ ಪ್ರಗತಿ ಮಹಾ ಸಂಘದಿಂದ ದೀಪಾವಳಿ ಆಚರಣೆ

ಮಹಿಳೆಯು ಶಿಕ್ಷಣದ ಬೆಳಕಿನಿಂದ ಬೆಳಗಿದರೆ ಕತ್ತಲೆಗಳು ದೂರ – ಫಾದರ್ ಅಸಿಸ್ಸಿ ಸಿ.ಒ.ಡಿ.ಪಿ. ಮಂಗಳೂರು ಹಾಗೂ ಬಾಳೆಪುಣಿ ಪ್ರಗತಿ ಮಹಾ ಸಂಘದ ಸದಸ್ಯ ಸಂಘಗಳ ವತಿಯಿಂದ ದೀಪಾವಳಿ
News

ಮಾಹಿತಿ ಆಯೋಗದ ಆದೇಶವನ್ನು ಪಾಲಿಸದೆ ನಿರ್ಲಕ್ಷ್ಯ ತೋರಿದ ಕುಣಿಗಲ್ ತಹಶೀಲ್ದಾರ್ ರಶ್ಮಿ ಇವರಿಗೆ ರೂಪಾಯಿ 25,000 ದಂಡ

ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಗೆ ಶಿಕ್ಷೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಆಯೋಗದ ಆದೇಶವನ್ನು ಪಾಲಿಸದೆ ನಿರ್ಲಕ್ಷ್ಯ ತೋರಿದ ಕುಣಿಗಲ್ ತಾಲ್ಲೂಕಿನ ತಹಶೀಲ್ದಾರ್ ರಶ್ಮಿ

You cannot copy content of this page