August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ನಗರ ಪೊಲೀಸ್ ರಿಂದ ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ

ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 02 ಮತ್ತು 03ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್ (ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂಪಾಯಿ 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ.

ಅಲ್ಲದೇ ಇಂದು ಜೂನ್ 03ರಂದು ಮಂಗಳವಾರ ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ, ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಟ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಹಾಜರಿದ್ದವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಸಹ ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ ಎಂದು ಸಿಟಿ ಪೊಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page