February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65ವರ್ಷ ಪ್ರಾಯದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಇಂದು ಜೂನ್ 3ರಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಮನೆಯವರಿಗೆ ಯಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದು, ನಾಳೆ ಜೂನ್ 4ರಂದು ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶೀಲ್ದಾರ್ ಸೂಚಿಸಿದ್ದಾರೆ. ಪೀಟರ್ ಮಥಾಯಸ್‌ರವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೋನ ದೃಢಪಟ್ಟಿರುತ್ತದೆ. ಜೂನ್ 2ರಂದು ಸೋಮವಾರ ಅವರು ಮೃತ ಪಟ್ಟಿದ್ದಾರೆ.
ತಹಶೀಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೋನ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page