November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65ವರ್ಷ ಪ್ರಾಯದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಇಂದು ಜೂನ್ 3ರಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಮನೆಯವರಿಗೆ ಯಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದು, ನಾಳೆ ಜೂನ್ 4ರಂದು ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶೀಲ್ದಾರ್ ಸೂಚಿಸಿದ್ದಾರೆ. ಪೀಟರ್ ಮಥಾಯಸ್‌ರವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೋನ ದೃಢಪಟ್ಟಿರುತ್ತದೆ. ಜೂನ್ 2ರಂದು ಸೋಮವಾರ ಅವರು ಮೃತ ಪಟ್ಟಿದ್ದಾರೆ.
ತಹಶೀಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೋನ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page