August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಡಿಪಾರು ನೋಟೀಸ್ – 8 ಮಂದಿ ವಕೀಲರ ಮೂಲಕ ಸಹಾಯಕ ಆಯುಕ್ತರ ಮುಂದೆ ಹಾಜರು

ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆ

ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಜೂನ್ 6ರಂದು ಶುಕ್ರವಾರ ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಪಟ್ಟಿ ತಯಾರಿಸಲಾಗಿತ್ತು. ಅದರಲ್ಲಿ 8 ಮಂದಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿತ್ತು. ಅದರಂತೆ ಇಂದು ಜೂನ್ 6ರಂದು ಶುಕ್ರವಾರ ನೋಟೀಸ್ ಜಾರಿಯಾದ 8 ಮಂದಿ ತಮ್ಮ ವಕೀಲರ ಜೊತೆ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್‌ ಕುಮಾರ್ ವಿಚಾರಣೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದಾರೆ. ಸದ್ಯ ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page