December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಂತೂರು ಜಂಕ್ಷನ್ ನಲ್ಲಿ ಎಡಕ್ಕೆ ತಿರುಗುವ ವಾಹನಗಳ ಸಂಚಾರ ಮುಕ್ತ

ನಂತೂರು ಜಂಕ್ಷನ್ ನಲ್ಲಿ [ಫ್ರೀ ಲೆಫ್ಟ್] ಮುಕ್ತ ಎಡ ತಿರುವು ಇಲ್ಲದೆ ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು.  ಆದರೆ ಜೂನ್ 7ರಿಂದ ಶನಿವಾರ ಟ್ರಾಫಿಕ್ ಸಿಗ್ನಲ್ ಗಳೇ ಇಲ್ಲದೆ ವಾಹನಗಳಿಗೆ ಸುಗಮ ಎಡ ತಿರುಗುಗಳ ನಿರ್ಮಾಣವು ಪೂರ್ಣಗೊಂಡಿದೆ. ಆದುದರಿಂದ ರಾಷ್ಟ್ರೀಯ ಹೆದ್ದಾರಿ 66 ಸುರತ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ 75 ಬಿ.ಸಿ. ರೋಡ್ ಕಡೆಗೆ ಸಿಗ್ನಲ್ ಕಿರಿಕಿರಿ ಇಲ್ಲದೆ ಮನ ಬಂದಂತೆ ಎಡಕ್ಕೆ ತಿರುಗಬಹುದು. ಅಂತೆಯೇ ಕುಲಶೇಖರ ಕಡೆಯಿಂದ ಪಂಪ್ ವೆಲ್ ಕಡೆಗೆ ಎಡಕ್ಕೆ ತಿರುಗಬಹುದಾಗಿದೆ. ಪಂಪುವೆಲ್ ಕಡೆಯಿಂದ ಬಂದ ವಾಹನಗಳು ಎಡಕ್ಕೆ ತಿರುಗಿ ಮಲ್ಲಿಕಟ್ಟೆ ಕಡೆಗೆ ಮುಕ್ತವಾಗಿ ಸಂಚರಿಸಬಹುದಾಗಿದೆ.

ಈ ಮೇಲೆ ಹೆಸರಿಸಿದ ಎಲ್ಲಾ ಮುಕ್ತ ಎಡ ತಿರುವುಗಳಿಗೆ ಬಿಟುಮೆನ್ ಕಾಂಕ್ರೀಟ್ ಮೇಲ್ಮೈ ರಸ್ತೆ ನಿರ್ಮಾಣಗೊಂಡಿದೆ. ಆದುದರಿಂದ ನಂತೂರು ಜಂಕ್ಷನ್ ನಲ್ಲಿ ಇದು ವಾಹನದಟ್ಟನೆಯನ್ನು ಹೆಚ್ಚಾಗಿ ಬೆಳಿಗ್ಗೆ ಹಾಗೂ ಸಾಯಂಕಾಲ ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಮಲ್ಲಿಕಟ್ಟೆಯಿಂದ ಸುರತ್ಕಲ್ ಕಡೆಗೆ ಹೋಗುವ ರಸ್ತೆಗೆ ಮುಕ್ತ ಎಡ ತಿರುವು ಈಗಾಗಲೇ ಇತ್ತು.

ಡ್ರೈನೇಜ್ ಮತ್ತು ಸರ್ವಿಸ್ ರಸ್ತೆ ತಯಾರಿ :-  ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಭಜಕ ಯೋಜನೆಗೆ ಪೂರ್ವಸಿದ್ಧತಾ ಹಂತವಾಗಿ NH 66 ಮತ್ತು NH 75 ರ ಉದ್ದಕ್ಕೂ ಒಳಚರಂಡಿ ಕಾಮಗಾರಿಗಳನ್ನು ಪ್ರಾರಂಭಿಸಿದೆ. ಅಧಿಕಾರಿಯೊಬ್ಬರ ಪ್ರಕಾರ, ಶೋಲ್ಡರ್ ಡ್ರೈನ್ ನಿರ್ಮಾಣವು ಮಳೆಗಾಲದಲ್ಲಿ ಮುಂದುವರಿಯಬಹುದು ಮತ್ತು ಮಳೆಗಾಲದ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಒಳಚರಂಡಿ ಕಾಮಗಾರಿಗಳು ಅಂತಿಮಗೊಂಡ ನಂತರ, ಮುಖ್ಯ ರಸ್ತೆಗಳಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಲು ಸರ್ವೀಸ್ ರಸ್ತೆಗಳನ್ನು ನಿರ್ಮಿಸಲು ಪ್ರಾಧಿಕಾರವು ಯೋಜಿಸಿದೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page