ಕರ್ತವ್ಯ ಲೋಪ ಆರೋಪ – ಇಬ್ಬರು ‘ಪಿಡಿಒ’ ಗಳು ಸಸ್ಪೆಂಡ್
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿಯಲ್ಲಿ ಸರ್ಕಾರಿ ಬೊಕ್ಕಸಕ್ಕೆ ನಷ್ಟ, ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪಿಡಿಒಗಳನ್ನು ಅಮನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ.


ಚಿಂಚೋಡಿ ಗ್ರಾಮ ಪಂಚಾಯತ್ ಪಿಡಿಓ ಶಿವರಾಜ್ ಹಾಗೂ ಲಿಂಗಸಗೂರಿನ ಕೋಠಾ ಗ್ರಾಮ ಪಂಚಾಯತ್ ಪಿಡಿಓ ಗಂಗಮ್ಮ ಅಮಾನತುಗೊಂಡವರು. ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಪಿಡಿಓ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ 26,71,303 ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ ಖರೀದಿ ಬಿಲ್ ವ್ಯತ್ಯಯ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಿಡಿಓ ಶಿವರಾಜ್ 14.77 ಲಕ್ಷ ರೂಪಾಯಿ ಹಣ ಬಳಕೆ ಬಗ್ಗೆ ದಾಖಲೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.




