May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಆಗ್ನೆಸ್ ಶಾಲೆಯಲ್ಲಿ ‘ಮೆರಿಟ್ ಡೇ’ ಆಚರಣೆ

ಎಳವೆಯಲ್ಲಿ ತೋರಿದ ಸಾಧನೆಗೆ ಫಲ ದೊರೆತಾಗ ಮುಂದಿನ ಜೀವನಕ್ಕೆ ಅದೇ ದಾರಿದೀಪವಾಗಿ ಇನ್ನಷ್ಟು ಸಾಧನೆ ಮಾಡುವಲ್ಲಿ ಪ್ರೇರಣೆ ದೊರಕುತ್ತದೆ. ಮಂಗಳೂರಿನ ಸಂತ ಆಗ್ನೆಸ್ ಸಿ.ಬಿ.ಎಸ್.ಇ. ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್.ಕೆ.ಜಿ.ಯಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ತೋರಿದ ವಾರ್ಷಿಕ ಸಾಧನೆಗೆ ಅನುಗುಣವಾಗಿ ಪ್ರಮಾಣ ಪತ್ರ ಹಾಗೂ ಸಾಧನಾ ಫಲಕಗಳನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಸೈಂಟ್ ಆಗ್ನೆಸ್ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಭಗಿನಿ ಜಾನೆಟ್ ಹಾಗೂ ಪದವಿ ಕಾಲೇಜಿನ ಗಣಿತ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಭಗಿನಿ ಲಿನೆಟ್ ಡಿಸೋಜ ಇವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತರಗತಿಯಲ್ಲಿ ಅತ್ಯಧಿಕ ಅಂಕ ಹಾಗೂ ವಿಷಯವಾರು ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.  ಅಂತೆಯೇ ಅದೇ ಶೈಕ್ಷಣಿಕ ವರ್ಷದಲ್ಲಿ ನೂರು ಶೇಕಡ ಹಾಜರಾತಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಭಗಿನಿ ಮರಿಯ ಸಾರಿಕ, ಉಪ ಪ್ರಾಂಶುಪಾಲರಾದ ಭಗಿನಿ ಮೀನಾ ಫೆರ್ನಾಂಡಿಸ್, ಸಂಯೋಜಕರಾದ ಭಗಿನಿ ಲವಿ ಶಾಂತಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

You may also like

News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್
News

ನ್ಯಾಯಾಂಗ ನೌಕರರಿಗೆ ಸಿವಿಲ್ ಜಡ್ಜ್ ಪರೀಕ್ಷೆಗೆ ದಾರಿ – ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕದಲ್ಲಿ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾನೂನು ಪದವಿಧರ ನೌಕರರಿಗೆ ಸಿವಿಲ್ ಜಡ್ಜ್ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡುವ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಈ

You cannot copy content of this page