November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ಡಿಸ್ಟಿಂಕ್ಷನ್

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024- 25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚೆಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ ಮಾರ್ಗದರ್ಶದಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ ಆಚಾರ್ಯ ಗೇರುಕಟ್ಟೆ ಇವರು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ (ಎ+) ಉತ್ತೀರ್ಣರಾಗಿರುತ್ತಾರೆ.

ದಿವಾಕರ ಆಚಾರ್ಯರವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದು ಹವ್ಯಾಸಿ ಕಲಾವಿದರಾಗಿ, ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು ಆನೆಗುಂದಿ ಶ್ರೀ ಸರಸ್ವತಿ ಪೀಠ ಕಟಪಾಡಿ ಪಡುಕುತ್ಯಾರು ಪರಮಪೂಜ್ಯ ಶ್ರೀ ಕಾಳಹಸ್ತೇಂದ್ರ ಸ್ವಾಮಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕುತ್ಯಾರು ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾಗಿದ್ದಾರೆ.

ಜೊತೆಗೆ ಯಕ್ಷ ಭಾರತಿ ರಿ. ಬೆಳ್ತಂಗಡಿ ಕಾರ್ಯದರ್ಶಿಯಾಗಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷರಾಗಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಬಂಟ್ವಾಳ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಿ.ಸಿ.ಆರ್‌.ಟಿ ಸಂಸ್ಥೆಯು ಹೈದರಾಬಾದ್ ಮತ್ತು ನವದೆಹಲಿಯಲ್ಲಿ ಆಯೋಜಿಸಿದ್ದ ಕಲೆ ಮತ್ತು ಸಾಂಸ್ಕೃತಿಕ ಸನಿವಾಸ ತರಬೇತಿಯಲ್ಲಿ ಇವರು ಭಾಗವಹಿಸಿದ್ದಾರೆ.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page