May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜಾಗರೂಕತೆ ಹಾಗೂ ಮದ್ಯಪಾನದ ಚಾಲನೆ ಸಲ್ಲದು – ಪೊಲೀಸ್ ಕಮಿಷನರ್ ಎಚ್ಚರಿಕೆ

ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಕೆಲವು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟರ್ ವಾಹನ ಕಾಯ್ದೆ ಕಲಂ 185ರ ಅನ್ವಯ ಪ್ರಕರಣ ದಾಖಲಿಸಿ 10 ಸಾವಿರ ರೂಪಾಯಿವರೆಗೆ ದಂಡ ಪಾವತಿಸಬೇಕಾಗುತ್ತದೆ. ಅತೀವೇಗದಿಂದ ವಾಹನ ಚಲಾಯಿಸಿದರೆ ಭಾರತೀಯ ಮೋಟರ್ ವಾಹನ ಕಾಯ್ದೆ ಕಲಂ 183ರ ಅನ್ವಯ ಪ್ರಕರಣ ದಾಖಲಿಸಿ 2/3/ಎಲ್‌ಎಂವಿ ವಾಹನಗಳಿಗೆ 1,000 ರೂಪಾಯಿ, ಎಚ್ಎಂವಿ/ಎಚ್‌ಜಿವಿ/ಇತರ ವಾಹನಗಳಿಗೆ 2,000 ರೂಪಾಯಿವರೆಗೆ ದಂಡ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಅಜಾಗರೂಕತೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರಿಂದ ಕುಟುಂಬ ಮತ್ತು ಅವಲಂಬಿತರು ದುಃಖ ಅನುಭವಿಸುತ್ತಾರೆ. ಹೆಚ್ಚಿನ ಆಜಾಗರೂಕತೆಯ ಚಾಲನೆಗಳು 30 ವರ್ಷದ ಕೆಳಗಿನ ಯುವಜನತೆಯೇ ಈ ತಪ್ಪನ್ನು ಮಾಡಿದ್ದಾರೆ. ಅಂತೆಯೇ ಹೆತ್ತವರು ತಮ್ಮ ಮಕ್ಕಳಿಗೆ ವಾಹನಗಳನ್ನು ನೀಡಿದಾಗ ಅಜಾಗರೂಕತೆ ಮಾಡಬಾರದಾಗಿ ಹಾಗೂ ಮಧ್ಯಪಾನ ಮಾಡಿ ವಾಹನ ಚಲಾಯಿಸದಂತೆ ತಮ್ಮ ಮಕ್ಕಳಿಗೆ ತಿಳಿ ಹೇಳಬೇಕು ಎಂದವರು ಎಚ್ಚರಿಸಿದ್ದಾರೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page