November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಜೂನ್ 21ರಂದು ಪುತ್ತೂರಿನಲ್ಲಿ ವಿಶ್ವ ಯೋಗ ದಿನ ಆಚರಣೆ

ವಿಶ್ವ ಯೋಗ ದಿನದ ಸಂದರ್ಭದಲ್ಲಿ ಪುತ್ತೂರು ದೇವಾಲಯದ ಸಭಾಭವನ /ನಟರಾಜ ವೇದಿಕೆ, ಪುತ್ತೂರು ಇಲ್ಲಿ ನಾಳೆ ಜೂನ್ 21ರಂದು ಶನಿವಾರ ಬೆಳಿಗ್ಗೆ 5:30 ಗಂಟೆಯಿಂದ ಸಾಯಂಕಾಲ 7:00ರ ತನಕ ವಿಶ್ವ ಯೋಗ ದಿನಾಚರಣೆಯು ನಡೆಯಲಿದೆ.

 

ಯೋಗ ಕೇಂದ್ರ ಪುತ್ತೂರು, ಸುದ್ದಿ ಸಮೂಹ ಸಂಸ್ಥೆಗಳು, ಅರಣ್ಯ ಇಲಾಖೆ ಪುತ್ತೂರು, ಮಹಾಬಲ ಲಲಿತ ಕಲಾ ಸಭಾ (ರಿ.) ಮತ್ತು ಅನಿಕೇತನ ಎಜುಕೇಶನಲ್ ಟ್ರಸ್ಟ್ (ರಿ.) ಪುತ್ತೂರು ಇವರೆಲ್ಲರ ಸಹಕಾರದೊಂದಿಗೆ ನಡೆಯಲಿರುವ ಈ ಯೋಗ ದಿನಾಚರಣೆಯ ಅಧ್ಯಕ್ಷತೆಯನ್ನು ಈಶ್ವರ ಭಟ್ ಪಂಜಿಗುಡ್ಡೆ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರು ವಹಿಸಲಿದ್ದಾರೆ. ವೇದಮೂರ್ತಿ ಶ್ರೀ ವಸಂತಕೃಷ್ಣ ಕೆದಿಲಾಯ, ಪ್ರಧಾನ ಅರ್ಚಕರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರು ಯೋಗ ದಿನಾಚರಣೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಿರಣ್ ಬಿ.ಎಂ. ಅರಣ್ಯಾಧಿಕಾರಿ ಪುತ್ತೂರು ಇವರು ಭಾಗವಹಿಸಲಿದ್ದಾರೆ.  ಈ ಸಂದರ್ಭದಲ್ಲಿ ದೇವಾಲಯದ ಪರಿಸರದಲ್ಲಿ ಮರ ಗಿಡಗಳ ನಿರ್ವಹಣೆ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಯೋಗ ಆಚರಣೆ ಸಮಿತಿ ಪುತ್ತೂರು ಇವರು ತಿಳಿಸಿದ್ದಾರೆ.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page