September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲೋಕಾಯುಕ್ತ ಪರಿಶೀಲನೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಸುಧೀರ್ಘ ಚರ್ಚೆ

ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ಹಾಗೂ ನ್ಯೂನ್ಯತೆಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ರವರು ಜೂನ್ 23ರಂದು ಸೋಮವಾರ ಭೇಟಿ ನೀಡಿ ಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದರು.

ಅನಂತರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಪ್ರಸ್ತುತ ಮಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು. ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆಯನ್ನೂ ನಡೆಸಿದರು.

ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿಯನ್ನು ಪಡೆಯಲು ಅವರು ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸ್ಮಾರ್ಟ್ ಸಿಟಿ ಎಂ.ಡಿ. ರಾಜು ಮತ್ತಿತರರು ಇದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page