April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡಿನ ವರ್ಕಾಡಿಯಲ್ಲಿ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ

ಆರೋಪಿ ಮೆಲ್ವಿನ್ ಮೊಂತೇರೊ ಪರಾರಿ

ಸ್ವತಃ ಮಗನೇ ಹೆತ್ತ ತಾಯಿಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪೈಶಾಚಿಕ ಕೃತ್ಯ ವರ್ಕಾಡಿಯಲ್ಲಿ ನಡೆದಿರುವ ಬಗ್ಗೆ ಇಂದು ಜೂನ್ 26ರಂದು ಗುರುವಾರ ವರದಿಯಾಗಿದೆ. ವರ್ಕಾಡಿ ನಲ್ಲೆಂಗಿಯ ಲೂಯಿಸ್ ಮೊಂತೇರೊರವರ ಪತ್ನಿ 59 ವರ್ಷ ಪ್ರಾಯದ ಹಿಲ್ಡಾ ಮೊಂತೇರೊ ಕೊಲೆಗೀಡಾದವರು. ನೆರೆಮನೆಯ ಸಂಬಂಧಿಕರಾದ ವಿಕ್ಟರ್ ರವರ ಪತ್ನಿ 30 ವರ್ಷ ಪ್ರಾಯದ ಲೊಲಿಟಾ ಅವರಿಗೂ ಗಂಭೀರ ಸುಟ್ಟ ಗಾಯಗಳಾಗಿವೆ.

ಆರೋಪಿ 26 ವರ್ಷ ಪ್ರಾಯದ ಮೆಲ್ವಿನ್ ಮೊಂತೇರೊ ಈ ಕೃತ್ಯ ನಡೆಸಿದ ಬಳಿಕ ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದಾನೆ. ತಾಯಿ ಹಿಲ್ಡಾ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಪುತ್ರ ಆಲ್ವಿನ್ ಕುವೈತ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಆಲ್ವಿನ್ ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಕುವೈತ್ ಗೆ ತೆರಳಿದ್ದರು. ಬುಧವಾರ ರಾತ್ರಿ ಊಟ ಮಾಡಿ ಮಲಗಿದ್ದ ಹಿಲ್ಡಾರವರನ್ನು ಮುಂಜಾನೆ ಕೊಲೆಗೈದ ಬಳಿಕ ಮನೆಯ ಹಿಂಬದಿಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಆರೋಪಿಯ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಟ್ಟು ಕರಕಲಾದ ಮೃತದೇಹವನ್ನು ಮನೆಯ ನೂರು ಮೀಟರ್ ದೂರದ ಪೊದೆಗಳೆಡೆಗೆ ಎಸೆದ ಆರೋಪಿ ಮೆಲ್ವಿನ್ ಸಂಬಂಧಿಕರಾದ ಲೊಲಿಟಾರ ಮನೆಗೆ ಬಂದು ತಾಯಿ ನಾಪತ್ತೆಯಾಗಿರುವುದಾಗಿ ತಿಳಿಸಿದ್ದ. ಗಾಬರಿಗೊಂಡು ಮನೆಗೆ ಬಂದಾಗ ಲೊಲಿಟಾರಿಗೂ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಲೋಲಿಟಾರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಬಳಿಕ ಆರೋಪಿ ಆಟೋರಿಕ್ಷಾ ಮೂಲಕ ಹೊಸಂಗಡಿಗೆ ತಲಪಿ ಅಲ್ಲಿಂದ ಮಂಗಳೂರಿಗೆ ಬಸ್ಸು ಮೂಲಕ ಪರಾರಿಯಾಗಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಆರೋಪಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದನು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ತಲುಪಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page