August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿವೃತ್ತ ಬ್ಯಾಂಕ್ ಉದ್ಯೋಗಿ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.

ಮೃತರನ್ನು ಅಳಕೆ ನಿವಾಸಿ 61 ವರ್ಷ ಪ್ರಾಯದ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಗಿರಿದರ್ ಯಾದವ್, ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಯಿಂದ ಬ್ಯಾಂಕ್ ಗೆ ಹೋಗಿ ಬರುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ತೆರಳಿದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನಲೆ ಗಿರಿದರ್ ಅವರ ಪತ್ನಿ ಮಂಗಳೂರಿನ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.

ಇಂದು ಜೂನ್ 26ರಂದು ಗುರುವಾರ ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗಿರಿಧರ್ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page