May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿವೃತ್ತ ಬ್ಯಾಂಕ್ ಉದ್ಯೋಗಿ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.

ಮೃತರನ್ನು ಅಳಕೆ ನಿವಾಸಿ 61 ವರ್ಷ ಪ್ರಾಯದ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಗಿರಿದರ್ ಯಾದವ್, ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಯಿಂದ ಬ್ಯಾಂಕ್ ಗೆ ಹೋಗಿ ಬರುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ತೆರಳಿದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನಲೆ ಗಿರಿದರ್ ಅವರ ಪತ್ನಿ ಮಂಗಳೂರಿನ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.

ಇಂದು ಜೂನ್ 26ರಂದು ಗುರುವಾರ ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗಿರಿಧರ್ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page