August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಹಪಾಠಿಯನ್ನು ಗರ್ಭ ಧರಿಸುವಂತೆ ಮಾಡಿದ ಸಹಪಾಠಿ – ಆರೋಪಿ ಪರಾರಿ

ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

ಆರೋಪಿ ಹಾಗೂ ಸಂತ್ರಸ್ತೆ ಸಹಪಾಠಿಗಳು ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ಯಾರೂ ಇಲ್ಲದ ಸಂದರ್ಭ ಯುವತಿಯನನ್ನು ಮನೆಗೆ ಕರೆತಂದು ಮದುವೆ ಆಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪರಿಣಾಮ ಪಿರ್ಯಾದಿದಾರರು ಗರ್ಭಿಣಿಯಾಗಿದ್ದು, ಈ ಬಗ್ಗೆ ಪಿರ್ಯಾದಿದಾರರು ಅರೋಪಿಗೆ ತಿಳಿಸಿದಾಗ ಆರೋಪಿಯು ಮದುವೆಯಾಗಲು ನಿರಾಕರಿಸಿರುತ್ತಾನೆ. ಈ ಬಗ್ಗೆ ಪಿರ್ಯಾದಿದಾರರು ಆರೋಪಿಯ ವಿರುದ್ಧ ಜೂನ್ 24ರಂದು ಮಂಗಳವಾರ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 49/2025, ಕಲಂ:64(1), 69 ಬಿ.ಎನ್.ಎಸ್‌ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page