April 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾತಿ ನಿಂದನೆ ಪ್ರಕರಣ – ಆರೋಪಿ ತಂದೆ ಮತ್ತು ಮಗ ದೋಷಮುಕ್ತ

ಪುತ್ತೂರಿನ ಪ್ರಖ್ಯಾತ ನ್ಯಾಯವಾದಿ ಮಹೇಶ್ ಕಜೆ ಮಂಡಿಸಿದ ವಾದ

ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಅವರ ಮಗ ಸೋಮಶೇಖರ ಗೌಡ ಎಂಬವರನ್ನು ದೋಷಮುಕ್ತಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ನೀಡಿದೆ. ನೆಲ್ಯಾಡಿ ಗ್ರಾಮದ ಮೇಲ್ಮಕ್ಕಿ ನಿವಾಸಿ ಅಣ್ಣು ಎಂಬುವರು 2017 ಫೆಬ್ರವರಿ 22ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ ಮತ್ತು ಅವರ ಮಗ ಸೋಮಶೇಖರ ಗೌಡರವರು ಏಕಾಏಕಿಯಾಗಿ ಅಣ್ಣು ಅವರ ಮನೆಯ ಅಂಗಳಕ್ಕೆ ಬಂದು ಅಣ್ಣು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಕೈ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆಯನ್ನು ಒಡ್ಡಿದ್ದರು ಎಂದು ಆರೋಪಿಸಲಾಗಿತ್ತು.

ಗಾಯಗೊಂಡಿದ್ದ ಅಣ್ಣು ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಳೆ ದ್ವೇಷದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಆರೋಪಿಸಿ ಅಣ್ಣು ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಕೇಸನ್ನು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶವನ್ನು ನೀಡಿದೆ. ಆರೋಪಿಗಳ ಪರ ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ನ್ಯಾಯಾವಾದಿ ಮಹೇಶ್ ಕಜೆ ವಾದಿಸಿದ್ದರು.

 

You may also like

News

ಶಿಕ್ಷಣ ತಜ್ಞ ದಿವಂಗತ ಫಾದರ್ ಮೆಲ್ವಿನ್ ಜೆ. ಪಿಂಟೋ ಅವರಿಗೆ ಕ್ಷೇವಿಯರ್ ಐಟಿಐ ಸಂಸ್ಥೆಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಏಪ್ರಿಲ್ 10ರಂದು ಶುಕ್ರವಾರ ನಿಧನರಾದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿಗಳು ಹಾಗೂ ಹಿರಿಯ ಜೆಸ್ಯೂಟ್ ಶಿಕ್ಷಣ ತಜ್ಞರಾದ ಧರ್ಮಗುರು ವಂದನೀಯ ಫಾದರ್ ಮೆಲ್ವಿನ್ ಜೆ.
News

Graduation Ceremony of Father Muller School & College of Nursing and Father Muller College (Speech & Hearing) celebrated

The Father Muller School of Nursing, Father Muller College of Nursing, and Father Muller College (Speech & Hearing), units of

You cannot copy content of this page