August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಮಧ್ಯ ಸಾಗಾಟ ಪ್ರಕರಣ ಆರೋಪಿ ಪ್ರತಾಪ್ ಶೆಟ್ಟಿ ಖುಲಾಸೆ

2023 ರ ಮಾರ್ಚ್ 15ರಂದು ರಾತ್ರಿ 12:15 ಗಂಟೆಗೆ ಗ್ರಾಮದ ಕಡಂಬು ಎಂಬಲ್ಲಿ ಆರೋಪಿ ಪ್ರತಾಪ್ ಶೆಟ್ಟಿ ಯಾವುದೇ ದಾಖಲಾತಿಗಳಿಲ್ಲದೆ ಸ್ವಿಫ್ಟ್ ಕಾರ್ ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮಧ್ಯದ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದುದ್ದನ್ನು ಉಪ್ಪಿನಂಗಡಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪಿ.ಎಸ್.ಐ.ರವರು ತಮ್ಮ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ ಆರೋಪಿ ವಶದಲ್ಲಿದ್ದ ಒಟ್ಟು 106.83 0 ಲೀಟರ್ ಮಧ್ಯವನ್ನು ವಾಹನ ಸಮೇತ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆ ಕಾಲಂ 32,34,43 (ಎ) ರಡಿಯಲ್ಲಿ ಪ್ರಥಮ ವರ್ತಮಾನವನ್ನು ದಾಖಲಿಸಿ ಪೂರ್ಣ ತನಿಕೆಯನ್ನು ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಪ್ರಕರಣವನ್ನು ಕೈಗೆತ್ತಿಕೊಂಡ ಮಾನ್ಯ ನ್ಯಾಯಾಲಯವು ಸುಮಾರು 12 ಸಾಕ್ಷಿಗಳ ಪೈಕಿ ಎಂಟು ಜನರನ್ನು ವಿಚಾರಣೆ ಮಾಡಿ ಸುಮಾರು 10 ದಾಖಲೆಗಳನ್ನು ಅಭಿಯೋಜನ ಪರ ಗುರುತಿಸುವಿಕೆಯನ್ನು ಮಾಡಿರುತ್ತಾರೆ. ಸದರಿ ಅಭಿಯೋಜನೆ ಮತ್ತು ಆರೋಪಿಯ ಪರ ವಾದ ವಿವಾದಗಳನ್ನು ಆಲಿಸಿದ ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಯೋಗೀಂದ್ರ ಶೆಟ್ಟಿರವರು ಸದರಿ ಆರೋಪಿಯನ್ನು ದೋಷ ಮುಕ್ತ ಎಂದು ತೀರ್ಪು ನೀಡಿ ಸದರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತದೆ. ಆರೋಪಿಯ ಪರ ಪುತ್ತೂರಿನ ಕಜೆ ಲಾ ಚೇಂಬರ್ಸ್ ನ ವಕೀಲರಾದ ಮಹೇಶ್ ಕಜೆರವರು ವಾದಿಸಿರುತ್ತಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page