February 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಮಧ್ಯ ಸಾಗಾಟ ಪ್ರಕರಣ ಆರೋಪಿ ಪ್ರತಾಪ್ ಶೆಟ್ಟಿ ಖುಲಾಸೆ

2023 ರ ಮಾರ್ಚ್ 15ರಂದು ರಾತ್ರಿ 12:15 ಗಂಟೆಗೆ ಗ್ರಾಮದ ಕಡಂಬು ಎಂಬಲ್ಲಿ ಆರೋಪಿ ಪ್ರತಾಪ್ ಶೆಟ್ಟಿ ಯಾವುದೇ ದಾಖಲಾತಿಗಳಿಲ್ಲದೆ ಸ್ವಿಫ್ಟ್ ಕಾರ್ ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮಧ್ಯದ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದುದ್ದನ್ನು ಉಪ್ಪಿನಂಗಡಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪಿ.ಎಸ್.ಐ.ರವರು ತಮ್ಮ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ ಆರೋಪಿ ವಶದಲ್ಲಿದ್ದ ಒಟ್ಟು 106.83 0 ಲೀಟರ್ ಮಧ್ಯವನ್ನು ವಾಹನ ಸಮೇತ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆ ಕಾಲಂ 32,34,43 (ಎ) ರಡಿಯಲ್ಲಿ ಪ್ರಥಮ ವರ್ತಮಾನವನ್ನು ದಾಖಲಿಸಿ ಪೂರ್ಣ ತನಿಕೆಯನ್ನು ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

ಪ್ರಕರಣವನ್ನು ಕೈಗೆತ್ತಿಕೊಂಡ ಮಾನ್ಯ ನ್ಯಾಯಾಲಯವು ಸುಮಾರು 12 ಸಾಕ್ಷಿಗಳ ಪೈಕಿ ಎಂಟು ಜನರನ್ನು ವಿಚಾರಣೆ ಮಾಡಿ ಸುಮಾರು 10 ದಾಖಲೆಗಳನ್ನು ಅಭಿಯೋಜನ ಪರ ಗುರುತಿಸುವಿಕೆಯನ್ನು ಮಾಡಿರುತ್ತಾರೆ. ಸದರಿ ಅಭಿಯೋಜನೆ ಮತ್ತು ಆರೋಪಿಯ ಪರ ವಾದ ವಿವಾದಗಳನ್ನು ಆಲಿಸಿದ ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಯೋಗೀಂದ್ರ ಶೆಟ್ಟಿರವರು ಸದರಿ ಆರೋಪಿಯನ್ನು ದೋಷ ಮುಕ್ತ ಎಂದು ತೀರ್ಪು ನೀಡಿ ಸದರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತದೆ. ಆರೋಪಿಯ ಪರ ಪುತ್ತೂರಿನ ಕಜೆ ಲಾ ಚೇಂಬರ್ಸ್ ನ ವಕೀಲರಾದ ಮಹೇಶ್ ಕಜೆರವರು ವಾದಿಸಿರುತ್ತಾರೆ.

You may also like

News

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪುಂಜಾಲಕಟ್ಟೆ ಪೊಲೀಸರಿಂದ ಬೆಂಗಳೂರಿನಲ್ಲಿ ಬಂಧನ

ಪುಂಜಾಲಕಟ್ಟೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ: ಬೆಳ್ತಂಗಡಿ ತಾಲೂಕಿನ
News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ,

You cannot copy content of this page