October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲೆ ಮೆರೆಸಿಕೊಂಡ ದನ ಕಳ್ಳನಿಂದ ಮಾದಕ ವಸ್ತು ಮಾರಾಟ – ಸಿಸಿಬಿ ಪೊಲೀಸರ ಬಲೆಗೆ

ಬೆಂಗಳೂರು/ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ತರಿಸಿಕೊಂಡು ಮುಡಿಪು ಕಂಬಳ ಪದವು ರಸ್ತೆಯಲ್ಲಿ ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳ ಅಬ್ದುಲ್ ಕಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ ಎರಡು ವರ್ಷಗಳಿಂದ ತಲೆಮೆರೆಸಿಕೊಂಡು ಓಡಾಡುತ್ತಿರುವ ಅಬ್ದುಲ್ ಕಬೀರ್ ನನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ಹಿಡಿದಿದ್ದಾರೆ.

ಆತನ ವಶದಿಂದ ರೂಪಾಯಿ 1,20,000/- ಮೌಲ್ಯದ 12.05 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, KA-25-MA-8950ನೇ ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂಪಾಯಿ 4,31,250/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜೂನ್ 3ರಂದು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಿದ್ದಾರೆ.

ಆರೋಪಿ 36 ವರ್ಷದ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಎಂಬಾತನ ವಿರುದ್ದ ಮಂಗಳೂರು ನಗರದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15 ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಆರೋಪಿಯು ಪೊಲೀಸ್ ಕ್ವಾರ್ಟರ್ಸ್ ರಸ್ತೆ ಅಸೈಗೋಳಿ ಕೋಣಾಜೆಯಲ್ಲಿ ವಾಸವಾಗಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

You may also like

News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ
News

ನವೆಂಬರ್ 2ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ

ಐತಿಹಾಸಿಕ 50 ವರ್ಷದ ಪಯಣ MLC ಐವನ್ ಡಿಸೋಜ ನೇತೃತ್ವದಲ್ಲಿ ಪತ್ರಿಕಾ ಗೋಷ್ಠಿ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವು

You cannot copy content of this page